ಮೈಸೂರು ಡಿಸೆಂಬರ್ 25: ಮೈಸೂರು ಅರಮನೆ ಮುಂಭಾಗ ಹೀಲಿಂಯ ಬಲೂನ್ ಮಾರುತ್ತಿದ್ದ ವ್ಯಕ್ತಿಯ ಬಳಿ ಇದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಬಲೂನ್ ಮಾರುತ್ತಿದ್ದ ವ್ಯಕ್ತಿ ಸಾವನಪ್ಪಿದ ಘಟನೆ ಮೈಸೂರು ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ನಡೆದಿದೆ. ಈ ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ.

ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ಲಕ್ಷ್ಮಿ, ನಂಜನಗೂಡಿನ ಮಂಜುಳಾ, ಕಲ್ಕತಾದ ಶಮಿನಾ ಶಬಿಲ್, ರಾಣಿ ಬೆನ್ನೂರಿನ ಕೊಟ್ರೇಶ್ ಗೆ ಗಾಯವಾಗಿದ್ದು, ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ
ವ್ಯಕ್ತಿಯೊಬ್ಬ ಸೈಕಲ್ನಲ್ಲಿ ಹೀಲಿಯಂ ಬಲೂನ್ ಮಾರುತ್ತಿದ್ದಾಗ ರಾತ್ರಿ 8.30ಕ್ಕೆ ಸಿಲಿಂಡರ್ ಸ್ಪೋಟವಾಗಿದ್ದು, ಬಲೂನ್ ಮಾರುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ’ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದರು.



