Connect with us

BANTWAL

ಬಂಟ್ವಾಳದ ಪಂಜಿಕಲ್ಲಿನಲ್ಲಿ ಮನೆ ಮೇಲೆ ಗುಡ್ಡ ಕುಸಿತ , ಮಣ್ಣಿನಡಿಗೆ ಸಿಲುಕಿದ ಇಬ್ಬರ ರಕ್ಷಣೆ, ಓರ್ವನಿಗೆ ಶೋಧ

ಬಂಟ್ವಾಳ, ಜುಲೈ 06: ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಭೂಕುಸಿತ ಉಂಟಾಗಿ ಕೇರಳ ಮೂಲದ ನಾಲ್ವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಮಣ್ಣಿನಡಿಗೆ ಸಿಲುಕಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಮೂವರನ್ನು ರಕ್ಷಿಸಲಾಗಿದ್ದು, ಉಳಿದ ಒಬ್ಬರಿಗೆ ಶೋಧ ಕಾರ್ಯ ನಡೆಯುತ್ತಿದೆ.

ಇಲ್ಲಿನ ಕೃಷಿಕ ಹೆನ್ರಿ ಕಾರ್ಲೋ ಎಂಬವರ ರಬ್ಬರ್ ತೋಟದ ಕಾರ್ಮಿಕರು. ಇವರೆಲ್ಲರೂ ಮನೆ ಸಮೀಪದ ಶೆಡ್ಡಿನಲ್ಲಿ ವಾಸವಾಗಿದ್ದರು. ಕಳೆದ ಎರಡು ದಿನಗಳ ಹಿಂದೆಯಷ್ಟೇ ಸ್ವಲ್ಪ ಕುಸಿದ ಮಣ್ಣು ಜೆಸಿಬಿ ಮೂಲಕ ತೆರವುಗೊಳಿಸಿದ್ದರು ಎನ್ನಲಾಗಿದೆ.

ಇದೀಗ ಮೂವರ ಸ್ಥಿತಿ ಗಂಭೀರವಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ, ಅಗ್ನಿಶಾಮಕ ದಳ ಪೊಲೀಸರು ಸ್ಥಳೀಯರ ಸಹಕಾರದಲ್ಲಿ ರಾತ್ರಿಯೇ ರಕ್ಷಣೆ ಕಾರ್ಯದಲ್ಲಿ ನಿರತರಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *