Connect with us

    BELTHANGADI

    ಕುಕ್ಕೇಡಿ ಸ್ಪೋಟ ಪ್ರಕರಣವನ್ನು NIA ಗೆ ವಹಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ..!

    ಪುತ್ತೂರು : ಬೆಳ್ತಂಗಡಿ ಕುಕ್ಕೇಡಿ ಸ್ಪೋಟ ಪ್ರಕರಣವನ್ನು ಎನ್.ಐ‌.ಎ ಗೆ ವಹಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ ಮಾಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಹಿಂಜಾವೇ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಅವರು ಕುಕ್ಕೇಟಿಯಲ್ಲಿ ಭಾನುವಾರ ನಡೆದ ಸ್ಫೋಟದ ತೀವೃತೆ ಅತೀ ಹೆಚ್ಚಾಗಿತ್ತು.

     

    ಕೇವಲ ಪಟಾಕಿ ತಯಾರಿಕಾ ಘಟಕದಲ್ಲಿ ಇಂಥಹ ತೀವೃತೆ ಇರಲು ಸಾಧ್ಯವಿಲ್ಲ ಮತ್ತು ಸ್ಫೋಟದ ತೀವೃತೆ 4 ಕಿಲೋಮೀಟರ್ ವರೆಗೂ ವ್ಯಾಪಿಸಿತ್ತು. ಸ್ಪೋಟಕ್ಕೆ ಸಿಲುಕಿದ ಕಾರ್ಮಿಕರ ಮೃತದೇಹ ಛಿದ್ರ ಛಿದ್ರವಾಗಿದೆ. ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಮತ್ತು ಕೇರಳದ ಚರ್ಚ್ ನಲ್ಲಿ ನಡೆದ ಬಾಂಬ್ ಸ್ಪೋಟಕ್ಕೂ ಈ ಘಟನೆಗೂ ಸಾಮ್ಯತೆ ಇರುವ ಸಾಧ್ಯತೆಯಿದೆ ಎಂದು ಶಂಕೆ ವ್ಯಕ್ತಪಡಿಸಿದ ಅವರು ಪ್ರಕರಣದ ಸತ್ಯಾಸತ್ಯತೆಯ ತನಿಖೆಯಾಗಬೇಕು ಮತ್ತು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಯಲೇಬೇಕಿದೆ. ಸರಕಾರ ಮತ್ತು ಪೋಲೀಸ್ ಇಲಾಖೆ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply