LATEST NEWS
ಹಿಂದೂಗಳ ವಿಚಾರಕ್ಕೆ ಬಂದ್ರೆ ಗಾಂಧಿಯನ್ನೇ ಬಿಟ್ಟಿಲ್ಲ ನಾವು ಎಂದಿದ್ದ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಬಂಧನ
ಮಂಗಳೂರು ಸೆಪ್ಟೆಂಬರ್ 19: ಹಿಂದೂ ವಿರೋಧಿ ವಿಚಾರ ಬಂದಾಗ ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ. ನೀವು ಯಾವ ಲೆಕ್ಕ?’ ಎಂದು ಮುಖ್ಯಮಂತ್ರಿ ವಿರುದ್ಧ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ನಿನ್ನೆ ಮಾಧ್ಯಮ ಗೋಷ್ಠಿಯಲ್ಲಿ ಧರ್ಮೇಂದ್ರ, ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಬಿಟ್ಟಿಲ್ಲ ನಾವು. ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಹತ್ಯೆ ಮಾಡಲಾಗಿದೆ. ಅಂತಹ ಸಂದರ್ಭದಲ್ಲಿ ನೀವು ಯಾವ ಲೆಕ್ಕ ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಲು ಸಾಧ್ಯವಿಲ್ಲ ಅಂದುಕೊಳ್ಳಬೇಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ದೇವಾಲಯ ಕೆಡವಿದ ವಿಚಾರದಲ್ಲಿ ಸಿಎಂಗೆ ಕೊಲೆ ಬೆದರಿಕೆ ಹಾಕಿರುವ ತನ್ನ ಹೇಳಿಕೆಗೆ ಧರ್ಮೇಂದ್ರ ಅವರು ಕ್ಷಮೆಯಾಚಿಸಿದ್ದರು. ಆದರೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಲೋಹಿತ್ ಕುಮಾರ್ ಸುವರ್ಣ ಎಂಬವರು ದೂರು ದಾಖಲಿಸಿದ್ದರು. ಈ ಸಂಬಂಧ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಹಾಸಭಾದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ನೀಡಿದ ಹೇಳಿಕೆ ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿರುವ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರಾಜೇಶ್ ಪವಿತ್ರನ್, ಮಹಾಸಭಾದಿಂದ ಉಚ್ಚಾಟಿತ ವ್ಯಕ್ತಿಯ ಪ್ರಚೋದನೆಯಿಂದ ಬಿಜೆಪಿ ಈ ಷಡ್ಯಂತ್ರ ಮಾಡುತ್ತಿದೆ. ಪತ್ರಿಕಾಗೋಷ್ಠಿಯಲ್ಲಿ ಇಲ್ಲದವರ ವಿರುದ್ಧವೂ ಎಫ್ಐಆರ್ ಮಾಡಲಾಗುತ್ತಿದೆ’ ಎಂದು ದೂರಿದ್ದಾರೆ.
You must be logged in to post a comment Login