Connect with us

    LATEST NEWS

    ದೀಪಕ್ ರಾವ್ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಹಿಂದೂ ಪರಸಂಘಟನೆಗಳಿಂದ ರಸ್ತೆ ತಡೆ,ಬಂಧನ

    ದೀಪಕ್ ರಾವ್ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಹಿಂದೂ ಪರಸಂಘಟನೆಗಳಿಂದ ರಸ್ತೆ ತಡೆ,ಬಂಧನ

    ಮಂಗಳೂರು,ಜನವರಿ.05 : ದೀಪಕ್ ರಾವ್ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಇಂದು ಮತ್ತೆ ಪ್ರತಿಭಟನೆಗಳು ಮುಂದುವರೆದಿವೆ.

    ಮಂಗಳೂರಿನ ಬೆಸೆಂಟ್ ಸರ್ಕಲ್ ನಲ್ಲಿ ಹಿಂದೂ ಪರ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು.

    ಈ ರಸ್ತೆ ತಡೆಯಲ್ಲಿ ಹಿಂದೂ ಪರ ಸಂಘಟನೆಗಳು ಹಾಗೂ ಬಿಜೆಪಿ ಪಕ್ಷದ ಮುಖಂಡರುಗಳು, ನೂರಾರು ಹಿಂದು ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಯಿತು.

    ಪೋಲಿಸ್ ಪ್ರತಿಬಂಧಕಾಜ್ಞೆ ನಿರ್ಲಕ್ಷಿಸಿ ಪ್ರತಿಭಟನೆ ನಡೆಸಿದ್ದರಿಂದ ಪ್ರತಿಭಟನಾಕಾರರನ್ನು ಪೋಲಿಸರು ಬಂಧಿಸಿದ್ದಾರೆ.

    ಸಂಘ ಪರಿವಾರದ ಪ್ರಮುಖರಾದ ಎಂ.ಬಿ ಪುರಾಣಿಕ್, ಶರಣ್ ಪಂಪ್ ವೆಲ್, ಜಗದೀಶ್ ಶೇಣವಾ, ಬಿಜೆಪಿ ನಾಯಕರುಗಳಾದ ವೇದ ವ್ಯಾಸ ಕಾಮತ್, ಮೋನಪ್ಪ ಭಂಡಾರಿ ಸಹಿತ ಆನೇಕನ್ನು ಪೋಲಿಸರು ಬಂಧಿಸಿದರು.

    ಢೀಢೀರ್ ಪ್ರತಿಭಟನೆ ನಡೆಸಿ ರಸ್ತೆ ನಡೆಸಿದ್ದರಿಂದ ಎಂ. ಜಿ. ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

    ವಿಡಿಯೋಗಾಗಿ…

    Share Information
    Advertisement
    Click to comment

    You must be logged in to post a comment Login

    Leave a Reply