Connect with us

LATEST NEWS

ಹಿಟ್ ಆಂಡ್ ರನ್ ಪ್ರಕರಣ – ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ಬಂಧನ

ಮುಲ್ಕಿ ಫೆಬ್ರವರಿ 04: ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ನಡೆದ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ರನ್ನು ಪೊಲೀಸರು ಬಂಧಿಸಿದ್ದಾರೆ.


ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್ ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿ ಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ದುರಸ್ತಿ ಮಾಡುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಚಲಿಸಿದ ಕಾರು ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು.

ಇದೀಗ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಆರೋಪಿ ಕಾರು ಚಾಲಕನನ್ನು ಹಳೆಯಂಗಡಿ ಇಂದ್ರ ನಗರ ನಿವಾಸಿ ಅರ್ಪಿತ್ ಎಂದು ಗುರುತಿಸಲಾಗಿದ್ದು, ಈತ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ಎಂದು ತಿಳಿದು ಬಂದಿದೆ.

 

Advertisement
Click to comment

You must be logged in to post a comment Login

Leave a Reply