MANGALORE
ಹಿಟ್ ಅಂಡ್ ರನ್ ; ಸ್ಕೂಟರ್ ಸವಾರ ಬಲಿ
ಮಂಗಳೂರು, ಜುಲೈ 11: ಕಾರಿನ ಧಾವಂತಕ್ಕೆ ಸಿಲುಕಿದ ಸ್ಕೂಟರ್ ಪಲ್ಟಿಯಾಗಿದ್ದು ರಸ್ತೆಗೆ ಬಿದ್ದ ಸವಾರ ಹಿಂದಿನಿಂದ ಬರುತ್ತಿದ್ದ ಸಿಮೆಂಟ್ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.

ಮೃತಪಟ್ಟ ಯುವಕ
ಸ್ಕೂಟರ್ ಸವಾರನಾಗಿದ್ದ ಉಳ್ಳಾಲ ಬಂಡಿಕೊಟ್ಯ ನಿವಾಸಿ ಉಬೇದ್ (28) ಮೃತಪಟ್ಟ ಯುವಕ. ಉಬೇದ್ ಗೆ ಜುಲೈ 23 ರಂದು ಮದುವೆ ನಿಶ್ಚಯವಾಗಿತ್ತು. ಸ್ಕೂಟರ್ ನಲ್ಲಿ ಸಹಸವಾರನಾಗಿದ್ದ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಕಾರಿನ ಮಾಲಕ
ಹಿಟ್ ಅಂಡ್ ರನ್ ಪರಾರಿಯಾಗಲು ಯತ್ನಿಸಿದ ಕಾರನ್ನು ತೊಕ್ಕೊಟ್ಟಿನಲ್ಲಿ ಸಾರ್ವಜನಿಕರು ಅಡ್ಡಗಟ್ಟಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಕಾರಿನಲ್ಲಿದ್ದ ಸೋಮೇಶ್ವರ ಪುರಸಭಾ ವ್ಯವಸ್ಥಾಪಕ ಕೃಷ್ಣ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರಕಾರಿ ಅಧಿಕಾರಿಯಾಗಿದ್ದು ತನ್ನ ಕಾರು ಡಿಕ್ಕಿಯಾಗಿ ಯುವಕರು ಸ್ಥಳದಲ್ಲೇ ದುರಂತಕ್ಕೀಡಾದರೂ ಅವರನ್ನು ಬಿಟ್ಟು ಹೋಗಿ ಮಾನವೀಯತೆ ಮರೆತು ವರ್ತಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ
Facebook Comments
You may like
ಮದುವೆ ಸಂಭ್ರಮ ಮಗಿಯುವ ಮೊದಲೆ ಹೃದಯಾಘಾತಕ್ಕೆ ಬಲಿಯಾದ ನವವಧು
ಶೂಟಿಂಗ್ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ನಟ ರಿಷಬ್ ಶೆಟ್ಟಿಗೆ ಗಾಯ
ಕಾಡಾನೆ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋದಾ ಯುವಕ ಅಪ್ಪಚ್ಚಿ!
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಐಶಾರಾಮಿ ಕಾರು ಮಾರಾಟ ಪ್ರಕರಣ – ಎಸ್ಐ ಕಬ್ಬಾಳರಾಜ್, ಇನ್ ಸ್ಪೆಕ್ಟರ್ ರಾಮಕೃಷ್ಣ ಸಸ್ಪೆಂಡ್
ನೆಲ್ಯಾಡಿಯಲ್ಲಿ ಗ್ಯಾಸ್ ಮತ್ತು ಡೀಸೆಲ್ ಟ್ಯಾಂಕರ್ ಅಪಘಾತ : ತಪ್ಪಿದ ಭಾರಿ ದುರಂತ
You must be logged in to post a comment Login