Connect with us

    KARNATAKA

    ಎಫ್ಐಆರ್ ದಾಖಲಾಗುತ್ತಿದ್ದಂತೆ ಬೆಂಗಳೂರಿನಿಂದ ಎಸ್ಕೇಪ್ ಆದ ಹಿತೇಶಾ ಚಂದ್ರಾನಿ

    ಬೆಂಗಳೂರು: ಜೊಮ್ಯಾಟೋ ಆಹಾರ ಡೆಲಿವರಿ ಸಂದರ್ಭ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಜೊಮ್ಯಾಟೋ ಡೆಲಿವರಿ ಬಾಯ್ ಕಾಮರಾಜ್ ಯುವತಿ ಹಿತೇಶಾ ಚಂದ್ರಾನಿ ಎಫ್ಐಆರ್ ದಾಖಲಿಸುತ್ತಿದ್ದಂತೆಯೇ ಆರೋಪ ಮಾಡಿದ್ದ ಮಹಿಳೆ ನಾಪತ್ತೆಯಾಗಿದ್ದಾಳೆ.


    ಆಹಾರ ಡೆಲಿವರಿ ವಿಳಂಬವನ್ನು ಪ್ರಶ್ನಿಸಿದ್ದ ಯುವತಿ ಹಿತೇಶಾ ಚಂದ್ರಾನಿ ಮೇಲೆ ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮರಾಜ್ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಹಿನ್ನೆಲೆಯಲ್ಲಿ ಪೊಲೀಸರು ಮಹಿಳೆಯನ್ನು ಸಂಪರ್ಕರಿಸಲು ಯತ್ನಿಸಿದ್ದು, ಈ ವೇಳೆ ಮಹಿಳೆ ಬೆಂಗಳೂರಿನಿಂದ ಕಾಲ್ಕಿತ್ತಿರುವುದು ಬೆಳಕಿಗೆ ಬಂದಿದೆ.


    ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಆರೋಪ ಮಾಡಿದ್ದ ಮಹಿಳೆಯ ಹಿತೇಶ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲು ಸಂಪರ್ಕಿಸಲು ಯತ್ನಿಸಿದ್ದೆವು. ಆದರೆ, ಮಹಿಳೆ ನಗರದಿಂದ ಹೊರಹೋಗಿದ್ದು, ಮಹಾರಾಷ್ಟ್ರದಲ್ಲಿ ಸಂಬಂಧಿಕರೊಬ್ಬರ ಮನೆಯಲ್ಲಿ ಇದ್ದಾರೆಂದು ತಿಳಿದುಬಂದಿದೆ ಎಂದು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರು ಮಾಹಿತಿ ನೀಡಿದ್ದಾರೆ.


    ನಗರಕ್ಕೆ ಬಂದ ಕೂಡಲೇ ಹೇಳಿಕೆ ನೀಡುವಂತೆ ಮಹಿಳೆಗೆ ಸೂಚನೆ ನೀಡಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರೆಯಲಿದೆ. ಮಹಿಳೆ ಹೇಳಿಕೆ ನೀಡಲು ಬರದೇ ಹೋದರೆ, ಆಕೆಯನ್ನು ಬಂಧನಕ್ಕೊಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply