Connect with us

    LATEST NEWS

    ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ನಿಧನಕ್ಕೆ ಗಣ್ಯರ ಶೃದ್ದಾಂಜಲಿ

    ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ನಿಧನಕ್ಕೆ ಗಣ್ಯರ ಶೃದ್ದಾಂಜಲಿ

    ಮಂಗಳೂರು ಅಗಸ್ಟ್ 16 ಭಾರತ ಕಂಡ ಧೀಮಂತ ನಾಯಕ, ರಾಜಕೀಯ ವಲಯದಲ್ಲಿ ಅಜಾತಶತ್ರು ಎಂದೇ ಖ್ಯಾತರಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ನಿಧನಕ್ಕೆ ಗಣ್ಯರು, ರಾಜಕೀಯ ಮುಖಂಡರು ಶೃದ್ದಾಂಜಲಿ ಸಲ್ಲಿಸಿದರು.

    ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ

    ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ ಅವರು ತಮ್ಮ ಅಧಿಕೃತ ಟ್ವಿಟ್ಟರ್​ ಖಾತೆಯಲ್ಲಿ ವಾಜಪೇಯಿ ಅಗಲಿಕೆಯಿಂದ ತುಂಬಲಾರದ ನಷ್ಟವಾಗಿದೆ ಎಂದು ಟ್ವೀಟ್​ ಮಾಡಿದ್ದಾರೆ.

    ನನಗೆ ಪ್ರೇರಣೆಯಾಗಿದ್ದ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ಅಗಲಿಕೆಯಿಂದ ಮನಸ್ಸು ಭಾರವಾಗಿದೆ. ಶ್ರೇಷ್ಠ ನಾಯಕ ಹಾಗೂ ಅಪ್ರತಿಮ ದೇಶಭಕ್ತರಾಗಿದ್ದ ಅವರ ನಿಧನವು ದೇಶಕ್ಕೆ ಬಹುದೊಡ್ಡ ನಷ್ಟ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ,” ಎಂಬುದಾಗಿ ಬಿಎಸ್​ ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply