Connect with us

DAKSHINA KANNADA

ಮಂಗಳೂರು ವಿಮಾನ ದುರಂತಕ್ಕೆ 15ವರ್ಷ : ಜಿಲ್ಲಾಡಳಿತ ಶ್ರದ್ಧಾಂಜಲಿ

ಮಂಗಳೂರು, ಮೇ 22- 2010ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಘಟನೆಯ ಸ್ಮರಣಾರ್ಥ ಗುರುವಾರ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು.


ನಗರದ ಕೂಳೂರು – ತಣ್ಣೀರುಬಾವಿ ರಸ್ತೆಯಲ್ಲಿ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣೆಗಾಗಿ ನಿರ್ಮಿಸಿರುವ ಪಾರ್ಕ್‍ನಲ್ಲಿ ಸ್ಮಾರಕಕ್ಕೆ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಗೌರವ ಸಲ್ಲಿಸಿದರು.


ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಿಲಿಕುಳ ಪ್ರಾಧಿಕಾರದ ಆಯುಕ್ತ ಅರುಣ್ ಕುಮಾರ್ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಾರ್ವಜನಿಕರು ಕೂಡ ಆಗಮಿಸಿ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ದುಬೈನಿಂದ ಬಂದಿದ್ದ ಐಎಕ್ಸ್ 812 ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು 2010ರ ಮೇ 22ರಂದು ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿತ್ತು. ಈ ವಿಮಾನದಲ್ಲಿದ್ದ 166 ಪ್ರಯಾಣಿಕರಲ್ಲಿ 158 ಮಂದಿ ಮೃತಪಟ್ಟಿದ್ದರು. 8 ಪ್ರಯಾಣಿಕರು ಮಾತ್ರ ಬದುಕುಳಿದಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *