Connect with us

    LATEST NEWS

    ಮಾರ್ಚ್ 2 ರಂದು ಪಂಚಾಯತ್ ರಾಜ್ ಹಾಗೂ ನಗರಾಡಳಿತದ ಜನಪ್ರತಿನಿಧಿಗಳಿಗೆ ಕ್ರೀಡಾಕೂಟ

    ಮಂಗಳೂರು ಫೆಬ್ರವರಿ 25:- ಪಂಚಾಯತ್ ರಾಜ್ ಹಾಗೂ ನಗರಾಡಳಿತದ ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಗ್ರಾಮ ಸ್ವರಾಜ್ ಟ್ರಸ್ಟ್ ಮತ್ತು ಸ್ಥಳೀಯ ಆಡಳಿತಗಳ ಜಂಟಿ ಆಶ್ರಯದಲ್ಲಿ “ಹೊಂಬೆಳಕು” ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಾರ್ಚ್ 2ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.


    ಈ ಬಗ್ಗೆ ಮಾಹಿತಿ ನೀಡಿದ ವಿಧಾನಪರಿಷತ್ ಸದಸ್ಯ ಡಾ ಮಂಜುನಾಥ ಭಂಡಾರಿ ಕಳೆದ ಏಳೆಂಟು ವರ್ಷಗಳಿಂದ ಕೋಟ ಶ್ರೀನಿವಾಸ ಪೂಜಾರಿ ಅವರು ಜನಪ್ರತಿನಿಧಿಗಳಿಗೆ ಹೊಳಪು ಕ್ರೀಡಾಕೂಟ ಮಾಡುತ್ತಾ ಇದ್ದಾರೆ. ಇದೀ ರೀತಿ ಸ್ಥಳೀಯ ಸಂಸ್ಥೆ ಚುನಾಯಿತ ಜನಪ್ರತಿಜಿಧಿಗಳಿಗೆ ದಕ್ಷಿಣಕನ್ನಡದಲ್ಲೂ ಮಾಡುವ ಬೇಡಿಕೆ ಬರುತ್ತಿತ್ತು. ಹೀಗಾಗಿ  ಪಂಚಾಯತ್ ರಾಜ್ ಹಾಗೂ ನಗರಾಡಳಿತದ ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಗ್ರಾಮ ಸ್ವರಾಜ್ ಟ್ರಸ್ಟ್ ಮತ್ತು ಸ್ಥಳೀಯ ಆಡಳಿತಗಳ ಜಂಟಿ ಆಶ್ರಯದಲ್ಲಿ “ಹೊಂಬೆಳಕು” ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಾರ್ಚ್ 2ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದರು.

    3 ರಿಂದ ನಾಲ್ಕು ಸಾವಿರ ಜನ ಭಾಗವಹಿಸಲಿದ್ದಾರೆ. ಅದರಲ್ಲಿ ಸರ್ಕಾರದ ಯೋಜನೆ ಮತ್ತು ಸ್ಥ.ಸಂಸ್ಥೆ ಜನಪ್ರತಿನಿಧಿಗಳಿಗೆ ಪೂರಕ ಮಾಹಿತಿ ನೀಡಲಾಗುವುದು ಎಂದರು. ಸುದ್ದಿಗೋಷ್ಟಿಯಲ್ಲಿ ಹೊಂಬೆಳಕು ಸಮಾವೇಶದ ಗೌರವ ಸಲಹೆಗಾರ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಗ್ರಾಮ ಸ್ವರಾಜ್ ಟ್ರಸ್ಟ್ ಆಧ್ಯಕ್ಷ ಕೆ ಸುಭಾಷ್‌ ಚಂದ್ರ ಶೆಟ್ಟಿ, ಕಾರ್ಯದರ್ಶಿ ಲಾರೆನ್ಸ್ ಡಿಸೋಜ, ಖಜಾಂಚಿ ಪ್ರವೀಣ ಚಂದ್ರ ಆಳ್ವ ಇದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply