Connect with us

    LATEST NEWS

    ಮಂಗಳೂರು – ಸಲಿಂಗ ಕಾಮ ಕೊಲೆಯಲ್ಲಿ ಅಂತ್ಯ

    ಮಂಗಳೂರು ಅಕ್ಟೋಬರ್ 12: ನವರಾತ್ರಿ ಸಂದರ್ಭ ವೇಷಧರಿಸುವ ಜಯಾನಂದ್ ಆಚಾರ್ಯ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮಂದಾರಬೈಲು ಜಯಾನಂದ ಆಚಾರ್ಯ(65) ಮೃತ ವ್ಯಕ್ತಿ. ಕುಂಜತ್ ಬೈಲ್ ಪ್ರದೇಶದ ದೇವಿನಗರ ನಿವಾಸಿ ರಾಜೇಶ್ ಪೂಜಾರಿ(31) ಕೊಲೆ ಆರೋಪಿ. ಲೈಂಗಿಕವಾಗಿ ಬಳಸಿಕೊಂಡು 300 ರೂಪಾಯಿ ಹಣ ನೀಡದೇ ನಿರಾಕರಿಸಿದ್ದಕ್ಕಾಗಿ ವೃದ್ಧನನ್ನು ಯುವಕನೊಬ್ಬ ಕತ್ತು ಹಿಸುಕಿ ಕೊಲೆ ಮಾಡಿದ್ದು, ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ.


    ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪದವು ಎಂಬಲ್ಲಿನ ಕಿಯೋನಿಕ್ಸ್​ಗೆ ಸೇರಿದ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.ಕೊಲೆಯಾದ ಜಯಾನಂದ ಆಚಾರ್ಯ ಕೂಲಿ ಕೆಲಸ ಮಾಡುತ್ತಿದ್ದು, ದಸರಾ ಸಂದರ್ಭದಲ್ಲಿ ಹೆಣ್ಣು ವೇಷ ಹಾಕುತ್ತಿದ್ದರು. ವಿಪರೀತ ಮದ್ಯದ ಚಟದ ದಾಸರಾಗಿದ್ದ ಇವರು ಯುವಕನೊಬ್ಬನನ್ನು ಲೈಂಗಿಕವಾಗಿ ಬಳಸಿಕೊಂಡು ಕೊಲೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

    ಬಂಧಿತ ಆರೋಪಿ ರಾಜೇಶ್ ಪೂಜಾರಿ ನಗರದ ಲಾಲ್​ಬಾಗ್​ನಲ್ಲಿರುವ ಬಾರ್​ನಲ್ಲಿ ಕೆಲಸಗಾರನಾಗಿದ್ದ. ಈತನನ್ನು ವೃದ್ಧ ಜಯಾನಂದ ಆಚಾರ್ಯ ಸಲಿಂಗಕಾಮದ ಉದ್ದೇಶಕ್ಕೆಂದು ಅಕ್ಟೋಬರ್​ 7, 8 ರಂದು ಬಳಸಿಕೊಂಡಿದ್ದರು. ಬಳಿಕ ಹಣ ನೀಡುವುದಾಗಿ ಹೇಳಿದ್ದರಂತೆ. ಆದರೆ, ಸಲಿಂಗಕಾಮದ ಬಳಿಕ 300 ರೂ. ಕೊಡಲು ಜಯಾನಂದ ಆಚಾರ್ಯ ಸತಾಯಿಸಿದ್ದರಂತೆ.ಇದರಿಂದ ಕೋಪಗೊಂಡ ಯುವಕ ರಾಜೇಶ್ ಪೂಜಾರಿ ಹಗ್ಗವೊಂದರಿಂದ ಜಯಾನಂದ ಆಚಾರ್ಯ ಅವರ ಕತ್ತು ಬಿಗಿದು ಕೊಲೆಗೈದಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕಾವೂರು ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply