Connect with us

    LATEST NEWS

    ಕಣಜ ಹುಳುಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು

    ಮಂಗಳೂರು ಸೆಪ್ಟೆಂಬರ್ 22: ಕಣಜಗಳ ದಾಳಿಗೆ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡು ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಎಡಪದವಿನ ಪಟ್ಲಚ್ಚಿಲ್ನ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿ ಪುತ್ರ ಕೇಶವ ಯಾನೆ ಕಿಟ್ಟ(24) ಎಂದು ಗುರುತಿಸಲಾಗಿದೆ.


    ಕೇಶವ ಅವರು ಮನೆಯ ತೆಂಗಿನ ಕಾಯಿ ಕೀಳಲು ತಾನು ಹೊಸದಾಗಿ ಖರೀದಿಸಿದ್ದ ಯಂತ್ರ ಬಳಸಿಕೊಂಡು ಭಾನುವಾರ ನೆರೆಮನೆಯವರ ತೆಂಗಿನ ಮರದಿಂದ ಕಾಯಿ ಕೀಳಲು ಹತ್ತಿದ್ದಾರೆ. ಈ ಸಂದರ್ಭ ಮರದಲ್ಲಿದ್ದ ಕಣದ ಹುಳುವಿನ ಗೂಡಿಗೆ ಕೇಶವರ ತಲೆ ತಾಗಿದ್ದು, ಏಕಾಏಕಿಯಾಗಿ ಹುಳುಗಳು ದಾಳಿ ಮಾಡಿವೆ. ಅವರ ಮೈಮೇಲೆ 70ಕ್ಕೂ ಹೆಚ್ಚು ಕಡೆ ಗಾಯಗಳಾ ಗಿವೆ. ತಕ್ಷಣ ಮೂಡುಬಿದಿರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೆ ಕೇಶವ ಕೊನೆಯುಸಿರೆಳೆದರು. ಅವಿವಾಹಿತರಾಗಿದ್ದ ಅವರು ಮೂವರು ಸಹೋದರರನ್ನು ಅಗಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply