Connect with us

    LATEST NEWS

    ಕಾಸರಗೋಡಿನ ಮಸೀದಿಗೆ ಹರಕೆ ರೂಪದಲ್ಲಿ ಕುದುರೆ

    ಕಾಸರಗೋಡು: ಸಾಮಾನ್ಯವಾಗಿ ಚಿನ್ನ, ಬೆಳ್ಳಿ, ನಗದು ರೂಪದಲ್ಲಿ ಹರಕೆ ಸಲ್ಲಿಸುವುದನ್ನು ನಾವು ಗಮನಿಸಿದ್ದೇವೆ.ಆದರೆ ಕಾಸರಗೋಡಿನ ಮಸೀದಿಗೆ ಹರಕೆ ರೂಪದಲ್ಲಿ ಭಕ್ತರೊಬ್ಬರು ಕುದುರೆ ಸಮರ್ಪಿಸಿದ್ದಾರೆ. ಇಲ್ಲಿನ ತಳಂಗರೆ ಮಾಲಿಕ್ ದೀನಾರ್ ದೊಡ್ಡ ಜಮಾಅತ್ ಮಸೀದಿಗೆ ತುಮಕೂರು ನಿವಾಸಿ ಮಹಮ್ಮದ್ ಶಂಸೀರ್ ಎಂಬ ಭಕ್ತ ಕುದುರೆಯನ್ನು ಹರಕೆ ರೂಪದಲ್ಲಿ ಸಮರ್ಪಿಸಿದ್ದಾರೆ.


    ತನ್ನ ಬೇಡಿಕೆಯೊಂದು ಈಡೇರಿದಲ್ಲಿ ಹರಕೆ ನೀಡುವುದಾಗಿ ಕೇಳಿಕೊಂಡಂತೆ ಈ ಹರಕೆ ಸಲ್ಲಿಸಿದ್ದು ಕುದುರೆಯನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
    ಹರಕೆ ರೂಪದಲ್ಲಿ ಬಂದ ಕುದುರೆಯನ್ನು ಹರಾಜು ಹಾಕಲು ಮಸೀದಿ ಸಮಿತಿ ತೀರ್ಮಾನಿಸಿದ್ದು, ಇದಕ್ಕೂ ಮೊದಲು ಅರಣ್ಯ ಇಲಾಖೆ ಅನುಮತಿ ಕೇಳುವುದಾಗಿ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ಕುದುರೆ ಸಮರ್ಪಣೆ ನಡೆದಿದೆ .

    Share Information
    Advertisement
    Click to comment

    You must be logged in to post a comment Login

    Leave a Reply