Connect with us

    LATEST NEWS

    ಮಹಾಮಳೆಗೆ ಕುಸಿದುಬಿದ್ದ ಮನೆ,ಹೊರಗೋಡಿ ಬಂದು ಪ್ರಾಣ ಉಳಿಸಿಕೊಂಡ ಮನೆ ಮಂದಿ…!!

    ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಹಾಮಳೆಯಾಟ ಮುಂದುವರೆದಿದ್ದು ಶುಕ್ರವಾರವೂ (ಜುಲೈ19)  ಜಿಲ್ಲೆಯಲ್ಲಿ  ಶಾಲಾ ಕಾಲೇಜುಗಳಿಗೆ( PUC) ವರೆಗೆ ಎಂದಿನಂತೆ ರಜೆ ಘೋಷಿಸಲಾಗಿದೆ.

    ಉಡುಪಿ ಕಡೆಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಕಟ್ಟೆಗುಡ್ಡೆಯ ಕುತ್ಪಾಡಿ ಶಾರದಾ ಪೂಜಾರ್ತಿ ಎಂಬವರ ಮನೆ ಗೋಡೆ ಧಾರಕಾರ ಮಳೆಗೆ ಕುಸಿದು ಬಿದ್ದಿದ್ದು, ಅಪಾರ  ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಕುಸಿದು ಬೀಳುವ ಕೆಲವೇ ಕ್ಷಣಗಳ ಹಿಂದೆ  ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಸುಮಾರು 30 ವರ್ಷಗಳ ಹಿಂದಿನ ಮನೆಯಾಗಿದ್ದು, ಕುಟುಂಬಸ್ಥರು ಮಣ್ಣಿನ ಗಾರೆ ಮಾಡಿ ಮನೆ ನಿರ್ಮಾಣ ಮಾಡಿದ್ದರು. ಈ ಮನೆಯಲ್ಲಿ ಒಟ್ಟು 10 ಮಂದಿ ವಾಸ ಮಾಡುತ್ತಿದ್ದರು. ಮನೆಯೊಳಗಿದ್ದ ದಾಖಲೆ ಪತ್ರ, ಮಕ್ಕಳ ಪುಸ್ತಕ, ಬಟ್ಟೆ ಬರೆ ಎಲ್ಲವೂ ಮಣ್ಣುಪಾಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು ಸರಕಾರ ಕೂಡಲೇ ಪರಿಹಾರ ನೀಡಬೇಕೆಂದು ಮನೆಯವರು ಮನವಿ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply