LATEST NEWS
ಉಡುಪಿ- ಈಜಲು ತೆರಳಿ ಸಮುದ್ರ ಪಾಲಾದ ಮೂವರು ವಿಧ್ಯಾರ್ಥಿಗಳು…!!
ಉಡುಪಿ ಸೆಪ್ಟೆಂಬರ್ 25: ಹೂಡೆ ಬೀಚ್ ನಲ್ಲಿ ಈಜಲು ತೆರಳಿದ್ದ ಮೂವರು ವಿಧ್ಯಾರ್ಥಿಗಳು ನೀರು ಪಾಲಾದ ಘಟನೆ ನಡೆದಿದ್ದು, ಇಬ್ಬರು ಸಾವನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದಾನೆ.
ಮಣಿಪಾಲದ ಎಂಐಟಿ ಎಂಜಿನಿಯರಿಂಗ್ ಕಾಲೇಜಿನ ಸುಮಾರು 15 ಮಂದಿ ವಿದ್ಯಾರ್ಥಿಗಳು ಹೂಡೆ ಬೀಚ್ನಲ್ಲಿ ವಿಹಾರಕ್ಕೆಂದು ಬಂದಿದ್ದರು. ಅಲ್ಲಿ ಕೆಲವರು ಸಮುದ್ರದ ನೀರಿನಲ್ಲಿ ಆಡುತ್ತಿದ್ದ ವೇಳೆ ಮೂವರು ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಅದರಲ್ಲಿ ಇಬ್ಬರನ್ನು ರಕ್ಷಿಸಿ ಮೇಲಕ್ಕೆ ತರಲಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ಮಣಿಪಾ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಇನ್ನೋರ್ವ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಲಾಗುತ್ತಿದೆ.
You must be logged in to post a comment Login