LATEST NEWS
ಸೌಜನ್ಯ ಪ್ರಕರಣ – ನಿರ್ದೋಷಿ ಸಂತೋಷ್ ರಾವ್ ಗೆ ನ್ಯಾಯ ದೊರಕಿಸಲು ಮಾನವ ಹಕ್ಕು ಆಯೋಗದಿಂದ ತನಿಖೆ
ಮೈಸೂರು ಅಗಸ್ಟ್ 19 : ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನಿರ್ದೋಷಿಯಾಗಿರುವ ಸಂತೋಷ್ ರಾವ್ ಅವರಿಗೆ ನ್ಯಾಯ ಕೊಡಿಸಬೇಕೆಂದು ಒಡನಾಡಿ ಸಂಸ್ಥೆ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಸಲ್ಲಿಸಿದೆ.
ಧರ್ಮಸ್ಥಳದಲ್ಲಿ ನಡೆದಿದ್ದ ಬಾಲಕಿ ಸೌಜನ್ಯಾ ಅಪಹರಣ, ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿ ಎಂದು ಬಿಂಬಿಸಲಾಗಿದ್ದ ಸಂತೋಷ್ರಾವ್ ನಿರ್ದೋಷಿಯಾಗಿರುವುದರಿಂದ ಅವರಿಗೆ ನ್ಯಾಯ ಕೊಡಿಸಬೇಕು’ ಎಂದು ಕೋರಿ ಇಲ್ಲಿನ ಒಡನಾಡಿ ಸೇವಾ ಸಂಸ್ಥೆಯು ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ರಾಜ್ಯ ಮಾನವ ಹಕ್ಕುಗಳ ಆಯೋಗವು ಬುಧವಾರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಗೆ ಆದೇಶಿಸಿದೆ.
ಸಂಸ್ಥೆಯ ನಿರ್ದೇಶಕ ಪರಶುರಾಮ್ ಎಂ.ಎಲ್. ಈ ಬಗ್ಗೆ ಆಯೋಗಕ್ಕೆ ಇತ್ತೀಚೆಗೆ ಪತ್ರ ಬರೆದಿದ್ದರು. ‘ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣವೆಂದು ದಾಖಲಿಸಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದರು.
You must be logged in to post a comment Login