Connect with us

    DAKSHINA KANNADA

    ಪುತ್ತೂರು -ಪತ್ನಿಗೆ ಚೂರಿಯಿಂದ ಇರಿದ ಪತಿ

    ಪುತ್ತೂರು ಜುಲೈ 27: ಕೌಟುಂಬಿಕ ಕಲಹ ಹಿನ್ನಲೆ ಪತಿ ತನ್ನ ಪತ್ನಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ.


    ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರಿ ಸಜರಾ (೪೦) ಹಲ್ಲೆಗೊಳಗಾದವರು. ಆಕೆಯ ಪತಿ ಮಡಂತ್ಯಾರು ಸಮೀಪದ ಕೊಲತ್ತಬೈಲು ಮಾಲಾಡಿ ನಿವಾಸಿ ಹಕೀಂ ಎಂಬಾತ ಹಲ್ಲೆ ನಡೆಸಿದ ಆರೋಪಿ.
    ಹಕೀಂ ಮತ್ತು ಸಜರಾ ಅವರ ವಿವಾಹ ೧೫ ವರ್ಷಗಳ ಹಿಂದೆ ನಡೆದಿತ್ತು. ವಿವಾಹವಾದ ಕೆಲ ವರ್ಷಗಳ ಬಳಿಕ ಹಕೀಂ ಸಜರಾ ಅವರಿಗೆ ಚಿತ್ರಹಿಂಸೆ ನೀಡಲು ಆರಂಭಿಸಿದ್ದು, ಈ ಹಿನ್ನಲೆಯಲ್ಲಿ ಸಜರಾ ಅವರು ಕಳೆದ ಮೂರು ವರ್ಷಗಳಿಂದ ಜೋರುಕಟ್ಟೆಯಲ್ಲಿರುವ ತನ್ನ ತವರು ಮನೆಗೆ ಬಂದು ಮಕ್ಕಳೊಂದಿಗೆ ನೆಲಸಿದ್ದರು. ಶುಕ್ರವಾರ ಮಧ್ಯಾಹ್ನ ವೇಳೆ ಚೂರಿ ಹಿಡಿದುಕೊಂಡು ಬಂದಿದ್ದ ಹಕೀಂ ಏಕಾಏಕಿಯಾಗಿ ಸಜರಾ ಅವರ ಮೇಲೆ ಹಲ್ಲೆ ನಡೆಸಿ, ತಡೆಯಲು ಬಂದ ತಂದೆ ಮಹಮ್ಮದ್ ಅವರ ಮೇಲೆಯೂ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ.

    ಹಲ್ಲೆ ನಡೆಸಿ ಪರಾರಿಯಾದ ಹಕೀಂನನ್ನು ಮನೆಮಂದಿ  ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಉಪ್ಪಿನಂಗಡಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡೂ ಕೈ, ಹೊಟ್ಟೆ ಮತ್ತು ಬೆನ್ನಿನ ಭಾಗಕ್ಕೆ ಗಾಯಗಳಾಗಿರುವ ಸಜರಾ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply