Connect with us

DAKSHINA KANNADA

ಪ್ರವೀಣ್ ನೆಟ್ಟಾರು ಸಾವು ಇಡೀ ದೇಶವನ್ನು ಎಬ್ಬಿಸಿದೆ – ಸಂಸದ ತೇಜಸ್ವಿಸೂರ್ಯ

ಬೆಳ್ಳಾರೆ ಜುಲೈ 29: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ಭಾರತೀಯ ಜನತಾ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿಸೂರ್ಯ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯ ಸರ್ಕಾರ ಈಗಾಗಲೇ ಇಬ್ಬರನ್ನು ಬಂಧಿಸುವಂತೆ ಕ್ರಮ ಕೈಗೊಂಡಿದೆ. ಪ್ರವೀಣ್ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದವನ ಮಗನಿಂದ ಕೃತ್ಯ ನಡೆದಿದೆ ಎಂಬ ಶಂಕೆ ಇದೆ.


ಪ್ರವೀಣ್ ಸಾವಿನಿಂದ ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ. ಸಮಸ್ತ ಹಿಂದೂಗಳಿಗೆ ವಿಶ್ವಾಸದ ಒಂದು ಮಾತು ಹೇಳ್ತೇನೆ. ಇಸ್ಲಾಮಿ ಜಿಹಾದ್ ತೊಡೆದುಹಾಕಲು ಪ್ರತಿಜ್ಞೆ ಮಾಡಿದ್ದೇವೆ. ಪ್ರವೀಣನ ಸಾವು ರಾಜ್ಯ, ದೇಶವನ್ನು ಎಬ್ಬಿಸಿದೆ ಎಂದರು.

ಈ ಯುದ್ಧ ಇವತ್ತು ನಾಳೆಗೆ ಮುಗಿಯುವುದಿಲ್ಲ. ಸಂಘಟಿತರಾಗಿದ್ದರೆ ಮಾತ್ರ ಈ ಯುದ್ಧದಲ್ಲಿ ನಾವು ಗೆಲ್ಲುತ್ತೇವೆ. ಸಂಘೇ ಶಕ್ತಿ ಕಲಿಯುಗೇ ಎಂಬುದು ನಮ್ಮ ಮಂತ್ರ. ನಾವು ಗಟ್ಟಿಯಾಗಿರಬೇಕು. ಒಗ್ಗಟ್ಟಿನಲ್ಲಿರಬೇಕು ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *