Connect with us

LATEST NEWS

ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? ರಾಮ್ ಗೋಪಾಲ್ ವರ್ಮಾ ವಿವಾದಾತ್ಮಕ ಹೇಳಿಕೆ

ಹೈದರಾಬಾದ್, ಜೂನ್ 25: ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಶೀಘ್ರದಲ್ಲೇ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಹೈದರಾಬಾದ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿ, ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? ಅದಕ್ಕಿಂತ ಮುಖ್ಯವಾಗಿ, ಕೌರವರು ಯಾರು? ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ. ಮುರ್ಮು ಅವರ ಬಗ್ಗೆ ನಿರ್ದೇಶಕರು ಟ್ವಿಟರ್ನಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ತೆಲಂಗಾಣದ ಹಿರಿಯ ಬಿಜೆಪಿ ನಾಯಕ ಜಿ ನಾರಾಯಣ ರೆಡ್ಡಿ ಅಬಿಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಬಿಡ್ಸ್ ಪೊಲೀಸ್ ಇನ್ಸ್ ಪೆಕ್ಟರ್ ಬಿ ಪ್ರಸಾದ ರಾವ್ ಈ ಬಗ್ಗೆ ಮಾಹಿತಿ ನೀಡಿದ್ದು, ‘ನಾವು ದೂರನ್ನು ಸ್ವೀಕರಿಸಿದ್ದೇವೆ ಮತ್ತು ಅದನ್ನು ಕಾನೂನು ಅಭಿಪ್ರಾಯಕ್ಕಾಗಿ ಕಳುಹಿಸಿದ್ದೇವೆ. ಕಾನೂನು ಅಭಿಪ್ರಾಯವನ್ನು ಪಡೆದ ನಂತರ, ನಾವು ವರ್ಮಾ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸುತ್ತೇವೆ ಎಂದು ಹೇಳಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *