Connect with us

    DAKSHINA KANNADA

    ಸುಳ್ಯ ಪೆರಾಜೆಯಲ್ಲಿ ಅಕ್ರಮ ಜಾನುವಾರು ಸಾಗಾಟ, ಇಬ್ಬರು ಪರಾರಿ, ಓರ್ವನ ಬಂಧನ..!

    ಸುಳ್ಯ:  ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ  ಪೆರಾಜೆಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಆರೋಪಿಗಳು ಪರಾರಿಯಾದ್ರೆ  ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

    ಪಿಕಪ್ ಚಾಲಕ ಸುಳ್ಯದ ಕಲ್ಲಪಳ್ಳಿ ನಿವಾಸಿ ವಿನೋದ್ ಬಂಧಿತನಾಗಿದ್ದರೆ, ಪಿಕಪ್ ನಲ್ಲಿದ್ದ ಪೆರಾಜೆಯ ಸಚಿನ್ ಹಾಗೂ ನಿತಿನ್ ಎಂಬವರು ಓಡಿ ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೆರಾಜೆ ಗ್ರಾಮದ ಕುಂಬಳಚೇರಿ ಕುಂದಲ್ಪಾಡಿ – ಕೂರ್ನಡ್ಕ ರಸ್ತೆಯ ಮೂಲಕ ಕೇರಳಕ್ಕೆ ಪಿಕಪ್ ವಾಹನದಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಮೂವರು ಗೋವುಗಳನ್ನು ಸಾಗಿಸುತ್ತಿರುವ ಬಗ್ಗೆ ಸ್ಥಳೀಯರು ಮಡಿಕೇರಿ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿ, ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದು, ಗೋವುಗಳನ್ನು ರಕ್ಷಿಸಿದ್ದಾರೆ. ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply