Connect with us

    LATEST NEWS

    ಅಕ್ರಮ ಗೋಸಾಗಾಟ – ಪೊಲೀಸ್ ಸಿಬ್ಬಂದಿಗೆ ಗಾಯ

    ಅಕ್ರಮ ಗೋಸಾಗಾಟ – ಪೊಲೀಸ್ ಸಿಬ್ಬಂದಿಗೆ ಗಾಯ

    ಉಡುಪಿ ಅಕ್ಟೋಬರ್ 17: ಕುಂದಾಪುರದ ಕಂಡ್ಲೂರಿನಲ್ಲಿ ಅಕ್ರಮ ಗೋಸಾಗಾಟಕ್ಕೆ ನಡೆಸುತ್ತಿದ್ದ ವಾಹನ ತಡೆಯಲು ಹೋದ ಪೊಲೀಸ್ ಸಿಬ್ಬಂದಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ.

    ಇಂದು ಮುಂಜಾನೆ ಕುಂದಾಪುರದ ಕಂಡ್ಲೂರಿನಲ್ಲಿ ಈ ಘಟನೆ ನಡೆದಿದೆ. ಅಕ್ರಮ ಗೋಸಾಗಾಟ ನಡೆಸುತ್ತಿದ್ದ ವಾಹನ ನಿಲ್ಲಿಸಲು ಪೊಲೀಸರು ಮುಂದಾದಾಗ ವಾಹನ ಸವಾರ ಪೊಲೀಸರ ಮೇಲೆ ವಾಹನ ಚಲಾಯಿಸಲು ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಪ್ರಶಾಂತ ನಾಗಣ್ಣ ಅವರಿಗೆ ವಾಹನ ತಾಗಿ ಗಾಯಗೊಂಡಿದ್ದಾರೆ. ನಂತರ ಗೋಸಾಗಾಟದ ವಾಹನ ಬೆನ್ನಟ್ಟಿದ ಪೊಲೀಸರು ಗುಲ್ವಾಡಿ ಸೇತುವೆ ಬಳಿ ಪಿಕ್ ಅಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆದರೆ ವಾಹನದಲ್ಲಿದ್ದ ಆರೋಪಿಗಳು ಪುರಾರಿಯಾಗಿದ್ದಾರೆ.

    ವಾಹನದಲ್ಲಿ ಸುಮಾರು 25 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲು ಪ್ರಯತ್ನಿಸಲಾಗುತ್ತಿತ್ತು. 25 ಹಸುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅದರಲ್ಲಿ 10 ಹಸು ಸಾವನಪ್ಪಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಪ್ರಶಾಂತ ನಾಗಣ್ಣ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply