Connect with us

    LATEST NEWS

    ಉಜ್ವಲ ಯೋಜನೆಯಲ್ಲಿ ಅಕ್ರಮ ಸಂಪರ್ಕ ಪ್ರಕರಣ ತನಿಖೆಯಲ್ಲಿ

    ಉಜ್ವಲ ಯೋಜನೆಯಲ್ಲಿ ಅಕ್ರಮ ಸಂಪರ್ಕ ಪ್ರಕರಣ ತನಿಖೆಯಲ್ಲಿ

    ಉಡುಪಿ 11: ಕೇಂದ್ರ ಸರಕಾರದ ಉಜ್ವಲ ಯೋಜನೆಯಡಿ ಜಿಲ್ಲೆಯ ಕೆಲವು ಗ್ಯಾಸ್ ಏಜನ್ಸಿಗಳು ಅಕ್ರಮ ಸಂಪರ್ಕ ನೀಡಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಬಗ್ಗೆ ತನಿಖೆಯ ಪ್ರಗತಿಯ ಬಗ್ಗೆ ಅಧ್ಯಕ್ಷರು ಸಭೆಯಲ್ಲಿ ಪ್ರಶ್ನಿಸಿದರು.

    ಇದಕ್ಕೆ ಉತ್ತರಿಸಿದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರು, ಜಿಲ್ಲೆಯ ಎರಡು ಗ್ಯಾಸ್ ಏಜನ್ಸಿಗಳು ಫಲಾನುಭವಿಗಳ ಹೆಸರಿನಲ್ಲಿ ಬೇರೆಯವರಿಗೆ ಸಂಪರ್ಕ ನೀಡಿರುವ ಬಗ್ಗೆ ದೂರುಗಳು ಬಂದಿದೆ.

    ಈ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲಿಸಿ, ತನಿಖೆಗೆ ಸೂಚಿಸಿದ್ದಾರೆ. ಉಜ್ವಲ ಯೋಜನೆಗೆ ಉಡುಪಿ ಜಿಲ್ಲೆಯಲ್ಲಿ ಎಚ್.ಪಿ.ಸಿ.ಎಲ್. ಸಂಸ್ಥೆಯು ನೋಡಲ್ ಆಗಿದ್ದು, ಈ ಪ್ರಕರಣದ ಬಗ್ಗೆ ಎಚ್‍ಪಿಸಿಎಲ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಉಜ್ವಲ ಫಲಾನುಭವಿಗಳ ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply