LATEST NEWS
ಮಂಗಳೂರು – ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ ಕಾರ್ಯಕರ್ತರು

ಮಂಗಳೂರು ಮಾರ್ಚ್ 10: ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ಹಿಡಿದು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ನಡೆದಿದೆ.
ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿರುವ ಮಾಹಿತಿ ದೊರತೆ ಹಿನ್ನಲೆ ಭಜರಂಗದಳ ಕಾರ್ಯಕರ್ತರು ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ ಕೂಡಲೇ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಇದಾದ ಬಳಿಕ ಸ್ಥಳಕ್ಕೆ ಬಂದ ಕದ್ರಿ ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭ ವಾಹನದಲ್ಲಿ ಸುಮಾರು 100 ಕೆ.ಜಿಗೂ ಅಧಿಕ ಗೋ ಮಾಂಸ ಇರುವುದು ಕಂಡುಬಂದಿದ್ದು, ಗೋ ಮಾಂಸ ಹಾಗೂ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
