Connect with us

DAKSHINA KANNADA

ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ: ಓರ್ವ ವಶಕ್ಕೆ

ಕಡಬ ಅಗಸ್ಟ್ 27: ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆಗೆ ಕಡಬ ಠಾಣಾ ಉಪನಿರೀಕ್ಷಕ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರು ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.


ಬಂಧಿತನನ್ನು ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಕಡಬ ಗ್ರಾಮದ ಕಳಾರ ಎಂಬಲ್ಲಿ ಮಹಮ್ಮದ್ ಇಸ್ಮಾಯಿಲ್ ರವರ ಹಳೆಯ ಮನೆಯ ಹಿಂಬದಿಯ ಶೆಡ್ ಒಂದರಲ್ಲಿ ಅಕ್ರಮವಾಗಿ ದನದ ಮಾಂಸ ಮಾಡುತ್ತಿರುವ ಕುರಿತು ಬಂದ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ.


ಅಕ್ರಮವಾಗಿ ಯಾವುದೇ ಪರವಾನಗಿ ಇಲ್ಲದೇ ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳದಲ್ಲಿದ್ದ ಪ್ಲಾಸ್ಟೀಕ್ ಟಾರ್ಪಾಲಿನಲ್ಲಿದ್ದ ಸುಮಾರು40 ಕೆ.ಜಿ ಯಷ್ಟು ದನದ ಮಾಂಸ, ದನದ ನಾಲ್ಕು ಕಾಲುಗಳು (ಕಳೆಬರಹ), ಎಲೆಕ್ಟ್ರಾನಿಕ್ ತೂಕಮಾಪನ-01, ಕಬ್ಬಿಣದ ಸತ್ತಾರ್ ಕತ್ತಿಗಳು-02,ಕಬ್ಬಿಣದ ಚೂರಿಗಳು-03, ಕಾಟು ಮರದ ತುಂಡು-01, ಶೆಡ್ ನ ಹೊರಗಡೆ ಕಟ್ಟಿ ಹಾಕಿದ್ದ ನಾಲ್ಕು ದನದ ಕರುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತರಾದ ಮಹಮ್ಮದ್ ಶರೀಫ್ ಮತ್ತು ಮಹಮ್ಮದ್ ಮುಸ್ತಫಾ ಎಂಬವರು ಓಡಿ ಪರಾರಿಯಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *