BANTWAL
ಅಕ್ರಮವಾಗಿ ಗಿಳಿ ಮಾರಾಟಕ್ಕೆ ಯತ್ನ ಒರ್ವನ ಬಂಧನ

ಅಕ್ರಮವಾಗಿ ಗಿಳಿ ಮಾರಾಟಕ್ಕೆ ಯತ್ನ ಒರ್ವನ ಬಂಧನ
ಬಂಟ್ವಾಳ ಜನವರಿ 12: ಗಿಳಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಬೆಂಗಳೂರು ಸಿ.ಐ.ಡಿ.ಪೋಲೀಸರು ಬಂಟ್ವಾಳ ದಲ್ಲಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ನಾವೂರ ಗ್ರಾಮದ ಅಬ್ದುಲ್ ಲತೀಪ್ ಎಂಬಾತ ಅಬಂಧಿತ ಆರೋಪಿ.
ಬಂಟ್ವಾಳ ತಾಲೂಕಿನ ಮೆಲ್ಕಾರ್ ಎಂಬಲ್ಲಿ ಎರಡು ಪಂಜರದಲ್ಲಿ ಸುಮಾರು 26 ಜೀವಂತ ಗಿಳಿಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಬೆಂಗಳೂರು ಸಿ.ಐ.ಡಿ. ಎಸ್.ಐ.ಹೆಚ್.ಕೆ.ರವಿಕುಮಾರ್ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ.
ಅಬ್ದುಲ್ ಲತೀಪ್ ಅವರು ತಮಿಳುನಾಡಿನಿಂದ ಗಿಳಿಗಳನ್ನು ತರಿಸಿ ಈ ಹಿಂದೆ ಅನೇಕ ಗಿಳಿಗಳ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದಾರೆ.

ಶುಕ್ರವಾರ ರಾತ್ರಿ ಖಚಿತ ಮಾಹಿತಿಯ ಮೇಲೆ ಬಂಟ್ವಾಳ ಕ್ಕೆ ಅಗಮಿಸಿದ ಬೆಂಗಳೂರು ಸಿ.ಐ.ಡಿ.ಪೋಲೀಸರು ಬಂಟ್ವಾಳದ ಮೆಲ್ಕಾರ್ ಎಂಬಲ್ಲಿ ಗಿಳಿಗಳನ್ನು ಮಾರಾಟ ಮಾಡಲು ಪ್ರಯತ್ನಿಸುರುವ ವೇಳೆ ರೆಡ್ ಹ್ಯಾಂಡ್ ಅಗಿ ಬಂಧಿಸಿದ್ದಾರೆ. ಪ್ರಕರಣವನ್ನು ಬಂಟ್ವಾಳ ವಲಯ ಅರಣ್ಯಾ ಧಿಕಾರಿಯವರಿಗೆ ಹಸ್ತಾಂತರಿಸಲಾಗಿದೆ.
ವನ್ಯ ಜೀವಿ ಸಂರಕ್ಷಣಾ ಕಾಯ್ದೆ 1072 ರಡಿಯಲ್ಲಿ ಕೇಸು ದಾಖಲಿಸಿ ಬಂಟ್ವಾಳ ವಲಯ ಅರಣ್ಯ ಅಧಿಕಾರಿಗಳು 26 ಜೀವಂತ ಗಿಳಿಗಳನ್ನು ಹಾಗೂ ಆರೋಪಿ ಗಳನ್ನು ಬಂಟ್ವಾಳ ನ್ಯಾಯಾಧೀಶ ರ ಮುಂದೆ ಹಾಜರುಪಡಿಸಲಾಗಿದೆ. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಮಂಗಳೂರು ಅರಣ್ಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.