LATEST NEWS
ಕೊನೆಗೂ ಎಚ್ಚೆತ್ತ ಜಿಲ್ಲಾ ಉಸ್ತುವಾರಿ ಸಚಿವರು ಹೊರ ರಾಜ್ಯದ ಮೀನು ವಾಹನ ಪ್ರವೇಶಕ್ಕೆ ನಿರ್ಬಂಧ
ಕೊನೆಗೂ ಎಚ್ಚೆತ್ತ ಜಿಲ್ಲಾ ಉಸ್ತುವಾರಿ ಸಚಿವರು ಹೊರ ರಾಜ್ಯದ ಮೀನು ವಾಹನ ಪ್ರವೇಶಕ್ಕೆ ನಿರ್ಬಂಧ
ಮಂಗಳೂರು: ಯಾವುದೇ ಮುಂಜಾಗೃತಾ ಕ್ರಮಗಳಿಲ್ಲದೆ ಬಂದರು ಪ್ರದೇಶದಲ್ಲಿ ಹೊರ ರಾಜ್ಯ ಮೀನು ಲಾರಿಗಳಿಗೆ ಜಿಲ್ಲೆಯಲ್ಲಿ ಮೀನು ಮಾರಾಟಕ್ಕೆ ಅವಕಾಶ ನೀಡಿದ್ದ ಜಿಲ್ಲಾಡಳಿತ ಮೀನು ಮಾರಾಟಗಾರರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ವಿಫಲರಾದ ಹಿನ್ನಲೆ ಎಚ್ಚೆತ್ತ ಉಸ್ತುವಾರಿ ಸಚಿವರು ಮಂಗಳೂರಿಗೆ ಹೊರ ರಾಜ್ಯಗಳಿಂದ ಬರುವ ಮೀನು ಲಾರಿಗಳಿಗೆ ನಿರ್ಬಂಧ ಹೇರಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಜಿಲ್ಲಾಡಳಿತ ಮೀನು ಸರಬರಾಜಿಗೆ ಅನುಮತಿ ನೀಡಿದ್ದು, ಮಂಗಳೂರಿನ ಮೀನು ವ್ಯಾಪಾರಿಗಳು ಮೀನು ಖರೀದಿಗೆ ಮುಗಿಬಿದ್ದಿದ್ದರು. ಯಾವುದೇ ಸಾಮಾಜಿಕ ಅಂತರ ಇಲ್ಲದೆ 2 ಸಾವಿರಕ್ಕೂ ಹೆಚ್ಚು ಮಂದಿ ಬಂದರಿನಲ್ಲಿ ಸೇರುತ್ತಿದ್ದರು. ಅನ್ ಲೋಡಿಂಗ್ ಮತ್ತು ಏಲಂ ಮೂಲಕ ವಿತರಣೆ ಮಾಡುತ್ತಿದ್ದಾರೆ. ಮಾಸ್ಕ್, ಗ್ಲೌಸ್ ಯಾವುದೇ ರಕ್ಷಾ ಕವಚ ಇಲ್ಲದೆ ಕಾರ್ಮಿಕರು ತೊಡಗಿಸಿಕೊಂಡಿದ್ದರು.
ದಿನಕ್ಕೆ ನೂರಕ್ಕೂ ಹೆಚ್ಚು ಹೊರ ರಾಜ್ಯದ ಲಾರಿಗಳು ಬರುತ್ತಿದ್ದು, ಇಲ್ಲಿಂದ ಖರೀದಿಸಿದ ಮೀನುಗಳನ್ನು ಮರುದಿನ ಕರಾವಳಿಯಾದ್ಯಂತ ಸರಬರಾಜು ಮಾಡಲಾಗುತ್ತೆ. ಈ ಮೂಲಕ ಉಚಿತವಾಗಿ ಕೊರೊನಾ ಕೂಡ ಗ್ರಾಮ ಗ್ರಾಮಗಳಿಗೆ ಸರಬರಾಜು ಆಗುವ ಅಪಾಯ ಎದುರಾಗಿತ್ತು.
ಮಂಗಳೂರಿನ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರದ ಸಮಸ್ಯೆ ಇರುವುದರಿಂದ ಮತ್ತು ಕೊರೋನದ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದ್ದಾರೆ.
You must be logged in to post a comment Login