Connect with us

    LATEST NEWS

    ಮಂಗಳೂರು -ನೈತಿಕ ಪೊಲೀಸ್ ಗಿರಿ…ಹೋಳಿ ಪಾರ್ಟಿ ಮೇಲೆ ಭಜರಂಗದಳದ ಕಾರ್ಯಕರ್ತರಿಂದ ದಾಳಿ

    ಮಂಗಳೂರು ಮಾರ್ಚ್ 26:ಹೋಳಿ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಅಲ್ಲಿದ್ದ ವಸ್ತುಗಳನ್ನು ಕಿತ್ತೆಸೆದ ಘಟನೆ ಮಂಗಳೂರು ನಗರ ಹೊರವಲಯದ ಪಡೀಲ್‌ನಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ.


    ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದು, ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ.


    ಈ ಕಾರ್ಯಕ್ರಮ ಆರಂಭವಾಗಿ ಸ್ವಲ್ಪ ಹೊತ್ತಿನಲ್ಲೇ ಬಜರಂಗದಳ ಕಾರ್ಯಕರ್ತರು ಅಲ್ಲಿಗೆ ನುಗ್ಗಿ ಆಕ್ಷೇಪಿಸಿದರು ಮತ್ತು ಕಾರ್ಯಕ್ರಮವನ್ನು ನಿಲ್ಲಿಸುವಂತೆ ಆಗ್ರಹಿಸಿದರು. ಈ ವೇಳೆ ಕಾರ್ಯಕರ್ತರು ಅಲ್ಲಿದ್ದ ವಸ್ತುಗಳನ್ನು ಕಿತ್ತೆಸೆಯಿತು, ಬ್ಯಾನರ್‌ಗಳನ್ನು ಹರಿದುಹಾಕಿದರು.

    ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಆಯೋಜಕರು ಮತ್ತು ಕೆಲವರ ಮೇಲೆ ಹಲ್ಲೆಗೂ ಬಜರಂಗ ದಳದ ಕಾರ್ಯಕರ್ತರು ಯತ್ನಿಸಿದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಬಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಅಷ್ಟು ಹೊತ್ತಿಗೆ ಕಾರ್ಯಕ್ರಮಕ್ಕೆ ಬಂದಿದ್ದವರೆಲ್ಲರೂ ಹೊರಟು ಹೋಗಿದ್ದರು. ಕಂಕನಾಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply