Connect with us

    DAKSHINA KANNADA

    ಮುಂದಿನ 5 ದಿನ ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಸಂಭವ, ರಾತ್ರಿ ಮಳೆ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು..!!

    ಬೆಂಗಳೂರು :  ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ  ಭಾರೀ ಮಳೆ ಸುರಿಯುತ್ತಿದ್ದು ಇನ್ನೂ 5 ದಿನಗಳ ಕಾಲ ರಾಜ್ಯದ  ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಸೇರಿದಂತೆ  ರಾಜ್ಯದಲ್ಲೆಡೆ  ಮಳೆಯ ವಾತಾವರಣ ಕಂಡು ಬರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಮಳೆ ಚುರುಕಾಗಿದ್ದು, ಧಾರಾಕಾರ ಮಳೆ ಸುರಿದು ಜನ ತತ್ತರಿಸುವಂತೆ ಮಾಡಿದೆ. ಇದೀಗ ದಕ್ಷಿಣ ಕರ್ನಾಟಕ ಭಾಗದಲ್ಲಿಯೂ ಮಳೆ ಅಬ್ಬರ ಜೋರಾಗಿದೆ. ಮುಂದಿನ ಐದು ದಿನಗಳಿಂದ ಒಂದು ವಾರದವರೆಗೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿಯಲಿದ್ದು, ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ರಾತ್ರಿ ಸುರಾತ್ರಿ ಮಳೆ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು

    ರಾತ್ರಿ ಸುರಿದ ಮಳೆಯಿಂದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿವೆ.

    ಯಲಹಂಕ, ಪುಟ್ಟೇನಹಳ್ಳಿ ಸೇರಿದಂತೆ ನಗರದ ಹಲವೆಡೆ ರಾತ್ರಿ ಸುರಿದ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರಿನ ಬಿನ್ನಿಪೇಟೆಯಲ್ಲಿ ಮಳೆಗೆ ಪಾರ್ಕ್​ವೆಸ್ಟ್ ಅಪಾರ್ಟ್ಮೆಂಟ್ ಹಿಂಭಾಗ ಕಾಂಪೌಂಡ್ ಗೋಡೆ ಕುಸಿದಿದೆ. 10 ಅಡಿ ಎತ್ತರದ ಗೋಡೆ ರಸ್ತೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ. ಗೋಡೆ ಕುಸಿದಿದ್ದರಿಂದ 10ಕ್ಕೂ ಹೆಚ್ಚು ಬೈಕ್​ಗಳು ಜಖಂ ಆಗಿದ್ದು ವಿದ್ಯುತ್​ ಕಂಬದ ಮೇಲೆ ಗೋಡೆ ಬಿದ್ದ ಹಿನ್ನೆಲೆ ಕಂಬ ವಾಲಿದೆ. ಮನೆಯಿಂದ ಹೊರಬರಲಾಗದೇ ಸ್ಥಳೀಯರು ಪರದಾಡುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply