Connect with us

LATEST NEWS

ನಾನೂ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ – ಸಿಎಂ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 13: ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು, ಬೆಂಗಳೂರಿಗೆ ತೆರಳಿದ ತಕ್ಷಣ ತಜ್ಞರ ಜೊತೆ ಮಾತನಾಡಿ, ತಜ್ಞರ ವರದಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.


ಉಡುಪಿಯಲ್ಲಿ ಮಾತನಾಡಿದ ಅವರು ಶಾಲೆಗಳ ಪ್ರಾರಂಭದ ಕುರಿತು ತಜ್ಞರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಇಂದು ವಿಶ್ವ ಅಂಗಾಂಗ ದಾನ ದಿನ. ಈ ದಿನ ನಾನು ಕೂಡ ಅಂಗಾಂಗ ದಾನ ಪತ್ರಕ್ಕೆ ಸಹಿ ಹಾಕುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.ಇತ್ತೀಚೆಗೆ ಕಿಡ್ನಿ ಸಹಿತ ಬೇರೆ ಬೇರೆ ಅಂಗಾಂಗ ದಾನ ಮಾಡುವುದು ಮತ್ತು ಅಂಗಾಂಗಗಳನ್ನು ಯಶಸ್ವಿಯಾಗಿ ಕಸಿ ಮಾಡುವುದು ನಡೆಯುತ್ತಿದೆ ಎಂದರು.

ಹೆಚ್ಚಿನ ಜನರು ಅಂಗಾಂಗ ದಾನಕ್ಕೆ ಮುಂದೆ ಬಂದರೆ ಸಾವಿರಾರು ಜೀವಗಳನ್ನು ಉಳಿಸಲು ಸಾಧ್ಯವಿದೆ. ಅಂಗಾಂಗ ದಾನಕ್ಕೆ ಎಲ್ಲರಿಗೂ ಕರೆ ಕೊಡುತ್ತಿದ್ದೇನೆ ಎಂದರು. ಅಂಗಾಂಗ ದಾನ ಮಾಡುವ ಮೂಲಕ ಮಣ್ಣಲ್ಲಿ ಮಣ್ಣಾಗುವ ಅಂಗಾಂಗಗಳು ಉಪಯೋಗವಾಗಿ ಇನ್ನೊಂದು ಜೀವ ಉಳಿಯಲು ಸಾಧ್ಯವಿದ್ದರೆ ಯಾಕೆ ಹಾಗೆ ಮಾಡಬಾರದು? ಆದ್ದರಿಂದ ಎಲ್ಲರೂ ವಿಶ್ವ ಅಂಗಾಂಗ ದಿನದಂದು ಎಲ್ಲರೂ ಅಂಗಾಂಗ ದಾನ ಮಾಡಲು ಸಂಕಲ್ಪ ಮಾಡೋಣ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *