LATEST NEWS
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಇನಾಯತ್ ಆಲಿ ಆಯ್ಕೆ…!!
ಮಂಗಳೂರು ಎಪ್ರಿಲ್ 19: ಇಡೀ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರೂ , ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ ಮಾತ್ರ ಕಗ್ಗಂಟಾಗಿ ಉಳಿದಿತ್ತು, ಕಾಂಗ್ರೇಸ್ ಐದು ಪಟ್ಟಿಯಲ್ಲೂ ಅಭ್ಯರ್ಥಿಯ ಹೆಸರು ಘೋಷಣೆಯಾಗಿರಲಿಲ್ಲ, ಕೊನೆಗೂ ಇನಾಯತ್ ಆಲಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೇಸ್ ಪಕ್ಷದ ಹೈಕಮಾಂಡ್ ಗೆ ತಲೆ ನೋವಾಗಿದ್ದ ಮಂಗಳೂರು ಉತ್ತರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಇನಾಯತ್ ಆಲಿ ಆಯ್ಕೆಯಾಗಿದ್ದಾರೆ. ಮಾಜಿ ಶಾಸಕ ಮೊಯಿದ್ದಿನ್ ಬಾವಾ ಮತ್ತು ಇನಾಯತ್ ಆಲಿ ನಡುವೆ ನಡೆದ ಸ್ಪರ್ಧೆಯಲ್ಲಿ ಇನಾಯತ್ ಆಲಿ ವಿಜಯಿ ಆಗಿದ್ದಾರೆ.
ಇನಾಯತ್ ಆಲಿ ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಆದರೆ ಮಾಜಿ ಶಾಸಕ ಮೊಯಿದ್ದಿನ್ ಬಾವಾ ತಮ್ಮ ಪ್ರಭಾವ ಬಳಸಿ ಟಿಕೇಟ್ ಪಡೆಯಲು ಪ್ರಯತ್ನ ಪಟ್ಟಿದ್ದರು.
You must be logged in to post a comment Login