Connect with us

    LATEST NEWS

    ಚಂಡ ಮಾರುತ – ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

    ಚಂಡ ಮಾರುತ – ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

    ಮಂಗಳೂರು ಅಕ್ಟೋಬರ್ 4: ಅರಬಿ ಸಮುದ್ರದಲ್ಲಿ ಅಕ್ಟೋಬರ್ 5 ರ ನಂತರ ಚಂಡಮಾರುತ ಪರಿವರ್ತನೆಗೊಳ್ಳಲಿರುವ ಹಿನ್ನಲೆಯಲ್ಲಿ ಮೀನುಗಾರಿಕೆಗೆ ತೆರಳಿರುವ ಮೀನುಗಾರನ್ನು ವಾಪಾಸಾಗಲು ಸೂಚನೆ ನೀಡಲಾಗಿದೆ.

    ಅರಬಿ ಸಮುದ್ರದಲ್ಲಿ ಉಂಟಾಗುವ ತೀವ್ರ ವಾಯುಭಾರ ಕುಸಿತದಿಂದಾಗಿ ನಾಳೆಯಿಂದ ಕರಾವಳಿಯಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆಯಲ್ಲಿ ಮೀನುಗಾರಿಕೆಗೆ ತೆರಳಿದ ಮೀನುಗಾರರನ್ನು ಕೂಡಲೇ ವಾಪಾಸ್ ಕರೆಸಬೇಕೆಂದು ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲಾಡಳಿತಕ್ಕೆ ಕೇಂದ್ರ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಅಧಿಕ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಸೇರಿದಂತೆ ಬೆಂಗಳೂರು ಭಾಗದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರ್ನಾಟಕ ಸೇರಿ ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಗಾಳಿ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಆಳ ಸಮುದ್ರಕ್ಕೆ ತೆರಳಿರುವ ಮೀನುಗಾರರನ್ನು ಕೂಡಲೇ ಕರೆಸುವಂತೆ ಕೇಂದ್ರ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತಕ್ಕೆ ಸೂಚಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply