ಉಜ್ಜಯಿನಿ : ಇನ್ನೇನು ತಾಳಿ ಕಟ್ಟುವ ವೇಳೆ ಕರೆಂಟ್ ಕೈಕೊಟ್ಟ ಪರಿಣಾಮ ಅಕ್ಕನಿಗೆ ತಾಳಿಕಟ್ಟಬೇಕಾಗಿದ್ದ ಯುವಕ ತಂಗಿಗೆ ಕಟ್ಟಿದ್ದು, ತಂಗಿಗೆ ತಾಳಿ ಕಟ್ಟಬೇಕಾದ ವರ ಅಕ್ಕನಿಗೆ ತಾಳಿ ಕಟ್ಟಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.

ರಮೇಶ್ಲಾಲ್ ಅವರ ಇಬ್ಬರು ಪುತ್ರಿಯರಾದ ನಿಕಿತಾ ಮತ್ತು ಕರಿಷ್ಮಾಗೆ ಬೇರೆ, ಬೇರೆ ಊರಿನ ಯುವಕರಾದ ದಂಗ್ವಾರಾ ಭೋಲಾ ಮತ್ತು ಗಣೇಶ್ ಅವರೊಂದಿಗೆ ಮದುವೆ ನಿಶ್ಚಯವಾಗಿತ್ತು. ಆದರೆ ಭಾನುವಾರ ಮುಹೂರ್ತದ ವೇಳೆ ಕರೆಂಟ್ ಕಟ್ ಹೋಗಿದ್ದು, ಅಕ್ಕ, ತಂಗಿ ಇಬ್ಬರು ಒಂದೇ ಬಣ್ಣದ ಉಡುಗೆ ಮತ್ತು ಹೂ ಮುಡಿದುಕೊಂಡಿದ್ದರಿಂದ ಅದಲು, ಬದಲು ಆಗಿ ವರರ ಜೊತೆಗೆ ಮದುವೆಯಾಗಿದೆ.
ಮದುವೆ ವೇಳೆ ಪುರೋಹಿತರು ಕೂಡ ಬದಲಾಗಿದ್ದ ವಧುಗಳ ಕೈ ಹಿಡಿದು ವರರಿಗೆ ಅಗ್ನಿ ಕುಂಡಲವನ್ನು ಸುತ್ತಿಸಿದ್ದಾರೆ. ಆದರೆ ಈ ವೇಳೆ ಸಹ ವಧು ಬದಲಾಗಿರುವ ವಿಚಾರ ತಿಳಿದಿಲ್ಲ. ಆದರೆ ವಿವಾಹ ನಂತರ ವರರಿಬ್ಬರು ತಮ್ಮ ಪತ್ನಿಯನ್ನು ಮನೆಗೆ ಕರೆದೊಯ್ದಾಗ ಅದಲು, ಬದಲು ಆಗಿರುವ ವಿಚಾರ ತಿಳಿದುಬಂದಿದೆ. ಇದೀಗ ವಧು-ವರರು ಮರುದಿನ ಮತ್ತೊಮ್ಮೆ ವಿವಾಹ ಮಾಡುವಂತೆ ಕೇಳಿಕೊಂಡಿದ್ದಾರೆ.