Connect with us

    KARNATAKA

    ಐಪಿಎಸ್ ಅಧಿಕಾರಿಗೂ ತಗ್ಲಾಕ್ಕೊಂಡ್ತು ಕೊರೊನಾ !

    ಬೆಂಗಳೂರು : ಕೊರೊನಾ ಮಹಾಮಾರಿ ಈಗ ರಾಜ್ಯದಲ್ಲಿ ಐಪಿಎಸ್ ಅಧಿಕಾರಿಯೋರ್ವರಿಗೂ ತಗಲಿದೆ. ಕೆಎಸ್ಆರ್ ಪಿ ಕಮಾಂಡೆಂಟ್ ಅಜಯ್ ಹಿಲೋರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.

    ಕೆಎಸ್ಆರ್ ಪಿಯಲ್ಲಿ ಹಲವು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಪೊಲೀಸ್ ಸಿಬ್ಬಂದಿಗೆ ಸೋಂಕು ಆಗುವ ಮುನ್ನ ಹಾಗೂ ನಂತರದಲ್ಲಿ ಅವರಿಗೆ ಧೈರ್ಯ ತುಂಬುವ ಕಾರ್ಯವನ್ನು ಅಜಯ್ ಹಿಲೋರಿ ಮಾಡಿದ್ದರು. ಇದೇ ಕಾರಣದಿಂದ ಇದೀಗ ಕೊರೊನಾ ಸೋಂಕು ಬಂದಿರುವ ಸಾಧ್ಯತೆಯಿದೆ.

    ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಜಯ್ ಹಿಲೋರಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಹಿಲೋರಿ ಅವರ ಸಂಪರ್ಕದಲ್ಲಿರುವವರನ್ನೂ ಕೂಡ ಪತ್ತೆಹಚ್ಚಿ ಕ್ವಾರಂಟೈನ್ ಗೆ ಒಳಪಡಿಸುವ ಕಾರ್ಯವನ್ನು ಆರೋಗ್ಯಾಧಿಕಾರಿಗಳು ಮಾಡುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply