KARNATAKA
ವರ್ಗಾವಣೆಗೆ ಹೆದರಲ್ಲ..ಭ್ರಷ್ಟಾಚಾರ ವಿರುದ್ದ ಹೋರಾಟ ಮುಂದುವರಿಕೆ – ಡಿ. ರೂಪಾ
ಬೆಂಗಳೂರು ಜನವರಿ 1: ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್ ಕುರಿತು ಜಟಾಪಟಿಗಿಳಿದಿದ್ದ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿ ಆದೇಶಿ ನೀಡಿದೆ.
ಸರ್ಕಾರ ಡಿ.ರೂಪಾ ಅವರನ್ನು ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರೋ ಡಿ.ರೂಪಾ ಅವರು ನನ್ನ ವರ್ಗಾವಣೆ ಬಂದಿದೆ..ಕರಕುಶಲ ನಿಗಮದ ಎಂಡಿ ಎಂದು. ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಕಳೆದ ಡಿಸೆಂಬರ್(1 ವರ್ಷ ಹಿಂದೆ) ಶಿಫಾರಸು ಮಾಡಿದ್ದರೂ, ಇನ್ನೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ. ಈ ವರ್ಗಾವಣೆ ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವರ್ಗಾವಣೆ ಸರ್ಕಾರಿ ಉದ್ಯೋಗದ ಭಾಗ. ಒಂದೇ ವರ್ಷದಲ್ಲಿ ಸಾಕಷ್ಟು ಬಾರಿ ವರ್ಗಾವಣೆಯಾದ ಅನುಭವ ಕೂಡ ನನಗಿದೆ. ನನ್ನ ವೃತ್ತಿ ಜೀವನದ ವರ್ಷಗಳಿಗಿಂತ ಹೆಚ್ಚು ಬಾರಿ ನಾನು ವರ್ಗಾವಣೆಯಾಗಿದ್ದೇನೆ. ತಪ್ಪು ತೋರಿಸುವುದು, ಸತ್ಯಾಂಶ ಎತ್ತಿ ಹಿಡಿಯುವುದು ಯಾವಾಗಲೂ ಅಪಾಯದಿಂದ ಕೂಡಿರುತ್ತದೆ ಎಂಬುದು ನನಗೆ ತಿಳಿದಿದೆ. ಹುದ್ದೆ ಯಾವುದಾದರೂ ನಾನು ತಲೆ ಕೆಡಿಸಿಕೊಳ್ಳುದಿಲ್ಲ. ನಾನು ರಾಜಿಯಾಗದೆ ನನ್ನ ಕೆಲಸವನ್ನು ಮುಂದುವರಿಸುತ್ತೇನೆ. ಹುದ್ದೆ ಯಾವುದಾದರೇನು. ನನಗೆ ಅದು ಅಪ್ರಸ್ತುತ. ಆದರೆ ಸಾರ್ವಜನಿಕ ಹಿತಾಸಕ್ತಿಯನ್ನು ಎತ್ತಿಹಿಡಿಯಬೇಕು ಮತ್ತು ಭ್ರಷ್ಟರಿಗೆ ಶಿಕ್ಷೆಯಾಗಬೇಕು. ನನ್ನ ಕೆಲಸ ಭ್ರಷ್ಟರ ಮೇಲೆ ಕ್ರಮ ಕೈಗೊಳ್ಳಲು ದಾರಿ ಮಾಡಿಕೊಟ್ಟರೆ, ನಾನು ಅದನ್ನು ಸ್ವಾಗತಿಸುತ್ತೇನೆ ಎಂದು ರೂಪಾ ಟ್ವೀಟ್ ಮಾಡಿದ್ದಾರೆ.
You must be logged in to post a comment Login