DAKSHINA KANNADA
ಮಳಲಿ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ, ತಾಂಬೂಲ ಪ್ರಶ್ನೆಯಲ್ಲಿ ದೈವಜ್ಞ ಗೋಪಾಲಕೃಷ್ಣ ಮಾಹಿತಿ
ಮಂಗಳೂರು, ಮೇ 25: : ನಗರದ ಮಳಲಿ ದರ್ಗಾ ವಿವಾದದ ಹಿನ್ನೆಲೆಯಲ್ಲಿ ಇಂದು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ಇಟ್ಟಿದ್ದು, ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ತಾಂಬೂಲ ಪ್ರಶ್ನೆಯ ವೇಳೆ ದೈವಜ್ಞ ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ.
ಕೇರಳದ ಪ್ರಖ್ಯಾತ ಜ್ಯೋತಿಷಿ ಜೆ.ಪಿ. ಗೋಪಾಲಕೃಷ್ಣ ಪಣಿಕರ್ ಅವರು ಮಸೀದಿ ಸ್ಥಳದಲ್ಲಿ ತಾಂಬೂಲ ಪ್ರಶ್ನೆ ಮೂಲಕ ದೇವರು ಇರುವುದು ನಿಜ ಎಂದು ಹೇಳಿದ್ದಾರೆ.
ಮಂಗಳೂರಿನ ಮಳಲಿಯ ಜುಮಾ ಮಸೀದಿಯಲ್ಲಿ ದೇವರು ಇರುವ ಬಗ್ಗೆ ಮಾಹಿತಿ ನೀಡಲಾಗಿದೆ. ಮಸೀದಿಯ ಕೆಳಗೆ ಹಿಂದೂ ದೇವಾಲಯದಂತಹ ವಾಸ್ತುಶಿಲ್ಪದ ವಿನ್ಯಾಸಗಳು ಕಂಡುಬಂದಿದ್ದು, ಇದು ವಿವಾದಕ್ಕೆ ಕಾರಣವಾಗಿದ್ದರಿಂದ ತಾಂಬೂಲ ಪ್ರಶ್ನೆ ಕೇಳಲಾಗಿತ್ತು.
You must be logged in to post a comment Login