Connect with us

    DAKSHINA KANNADA

    ‘ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ’ : BJP ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸ್ಪಷ್ಟನೆ

    ಪುತ್ತೂರು : ತುಳು ಚಿತ್ರನಟ,ನಿರ್ದೇಶಕ  ದೇವದಾಸ್ ಕಾಪಿಕಾಡರ ಬಿಜೆಪಿ ಪಕ್ಷ ಸೇರ್ಪಡೆ ವಿವಾದ ಕುರಿತು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಸ್ಪಷ್ಟನೆ ನೀಡಿದ್ದು ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ ಎಂದಿದ್ದಾರೆ.


    ಮಾದ್ಯಮಗಳಿಗೆ ಈ ಬಗ್ಗೆ ಹೇಳಿಕೆ ನೀಡಿದ ಅವರು ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ. ಪಕ್ಷದ ಸದಸ್ಯನಾಗಿ ಮಾಡುವ ಉದ್ಧೇಶದಿಂದ ಅವರ ಮನೆಗೆ ಹಿರಿಯರು ಭೇಟಿ ನೀಡಿದ್ದರು. ಸದಸ್ಯತ್ವ ಅಭಿಯಾನದ ವಿಚಾರದಲ್ಲಿ ಅವರು ಪೂರಕವಾಗಿ ಸ್ಪಂದಿಸಿದ್ದರು. ಪಕ್ಷಾತೀತವಾಗಿರುವ ಸೆಲೆಬ್ರೆಟಿಗಳ ಮನೆಗೆ ಪಕ್ಷದ ಮುಖಂಡರು ಭೇಟಿಯಾಗೋದು ಸಾಮಾನ್ಯವಾಗಿದ್ದು ಅವರು ಪಕ್ಷದ ಕಾರ್ಯಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳುತ್ತಾರೆ ಎಂದಲ್ಲ.

    ದೇವದಾಸ್ ಕಾಪಿಕಾಡ್ ರನ್ನು ಇತರ ಪಕ್ಷದವರೂ ಭೇಟಿಯಾಗುತ್ತಾರೆ. ಇದೇ ವಿಚಾರವನ್ನಿಟ್ಟು ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎನ್ನುವ ಸುಳ್ಳು ಸುದ್ಧಿ ಹರಡಲಾಗಿದೆ. ದೇವದಾಸ್ ಕಾಪಿಕಾಡ್ ತುಳು ಭಾಷೆಯನ್ನು ರಾಷ್ಟ್ರ ಮಟ್ಟದಲ್ಲಿ ಪರಿಚಯಿಸಿದಂತಹ ಕಲಾವಿದರಾಗಿದ್ದಾರೆ. ಸ್ವಭಾವಿಕವಾಗಿ ಅವರು ಪಕ್ಷದ ಹಿತ ಚಿಂತಕರು ಆಗಿರಬಹುದು. ಈ ಹಿನ್ನಲೆಯಲ್ಲಿ ಅವರನ್ನು ಭೇಟಿ ಮಾಡಿರೋದು‌ ಸತ್ಯ ಅದರೆ ಈ‌ ವಿಚಾರದಲ್ಲಿ ಅವರ ಕಲಾ ಬದುಕಿಗೆ ತೊಂದರೆಯನ್ನುಂಟು ಮಾಡುವ ಪ್ರಯತ್ನ ನಡೆದಿದೆ ಎಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply