Connect with us

    KARNATAKA

    ಹೈಕಮಾಂಡ್ ಸಂದಾನಕ್ಕೆ ಬಗ್ಗದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್ ಬೈ

    ದಾರವಾಡ ಎಪ್ರಿಲ್ 16: ಚುನಾವಣೆಗೆ ಟಿಕೆಚ್ ನೀಡದ ಹಿನ್ನಲೆ ಮುನಿಸಿಕೊಂಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮನವೊಲಿಸಲು ಬಿಜೆಪಿ ಹೈಕಮಾಂಡ್ ವಿಫಲವಾಗಿದ್ದು, ಈ ಹಿನ್ನಲೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.


    ಇಂದು ರಾತ್ರಿ ಶೆಟ್ಟರ್ ಮನೆಗೆ ಧರ್ಮೇಂದ್ರ ಪ್ರಧಾನ್, ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿ ಸಂಧಾನ ಮಾತುಕತೆ ನಡೆಸಿದ್ದರು. ಆದರೆ ಈ ಮಾತುಕತೆ ವಿಫಲವಾದ ಬಳಿಕ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು.

    15 ದಿನಗಳ ಹಿಂದೆ ರಾಜಕೀಯ ನಿವೃತ್ತಿಯಾಗಬೇಕು ಎಂದು ಹೇಳಿದ್ದರೆ ನಾನು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳುತ್ತಿದ್ದೆ. ಆದರೆ ಯಾವುದೇ ಮಾಹಿತಿ ನೀಡದೇ ಕೊನೆಯವರೆಗೆ ಸತಾಯಿಸಿದ್ದಾರೆ. ಈ ಕಾರಣಕ್ಕೆ ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಹೇಳಿದರು. ಭಾನುವಾರ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ನೀಡುತ್ತೇನೆ. ನಂತರ ನನ್ನ ಹಿತೈಷಿಗಳ ಜೊತೆ ಸೇರಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಶೆಟ್ಟರ್‌ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply