Connect with us

    DAKSHINA KANNADA

    ಮೂಡಬಿದಿರೆಯಲ್ಲಿ ಸತ್ತ ಕತ್ತೆಯನ್ನು ಬಿಜೆಪಿ ನಿಲ್ಲಿಸಿದೆ – ಜಗದೀಶ್ ಅಧಿಕಾರಿ

    ಮೂಡಬಿದಿರೆಯಲ್ಲಿ ಸತ್ತ ಕತ್ತೆಯನ್ನು ಬಿಜೆಪಿ ನಿಲ್ಲಿಸಿದೆ – ಜಗದೀಶ್ ಅಧಿಕಾರಿ

    ಮಂಗಳೂರು ಏಪ್ರಿಲ್ 17: ರಾಜ್ಯ ವಿಧಾನಸಭೆಗೆ ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕರಾವಳಿಯಲ್ಲಿ ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮೂಡಬಿದ್ರೆ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಬಿಜೆಪಿ ವರಿಷ್ಠರ ವಿರುದ್ದ ಹರಿಹಾಯ್ದಿದ್ದಾರೆ.

    ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದಿರೆ ಕ್ಷೇತ್ರದಲ್ಲಿ ಬಿಜೆಪಿ ಉಮಾನಾಥ ಕೋಟ್ಯಾನ್ ಅವರಿಗೆ ಟಿಕೆಟ್ ನೀಡಿದೆ. ಈ ಹಿನ್ನಲೆಯಲ್ಲಿ ಮೂಡಬಿದ್ರೆಯ ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮುಲ್ಕಿ ಮೂಡಬಿದರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಜಗದೀಶ್ ಅಧಿಕಾರಿ ಬಿಜೆಪಿ ವರಿಷ್ಠರ ವಿರುದ್ದ ತೊಡೆ ತಟ್ಟಿದ್ದಾರೆ.

    ಬಿಜೆಪಿ ವರಿಷ್ಠರ ವಿರುದ್ಧ ಬಹಿರಂಗ ವಾಗಿಯೇ ಹೇಳಿಕೆ ನಿಡಿದ್ದು ಮೂಡಬಿದರೆಯಲ್ಲಿ ಗೆಲ್ಲುವ ಕುದುರೆಯನ್ನು ನಿಲ್ಲಿಸಿಲ್ಲ. ಅದರ ಬದಲಿಗೆ ಸತ್ತ ಕತ್ತೆಯನ್ನು ‌ನಿಲ್ಲಿಸಲಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡಬಿದರೆ ಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಉಮಾನಾಥ್ ಕೋಟ್ಯಾನ್ ಗೆ ಟಿಕೆಟ್ ನೀಡಿರೋದಕ್ಕೆ ವಿರೋಧ ವ್ಯಕ್ತಪಡಿಸಿದರು. ಪಕ್ಷಕ್ಕಾಗಿ ಈ ವರೆಗೆ ನೀಯತ್ತಿನಿಂದ ದುಡಿದಿದ್ದೇನೆ , ಕ್ಷೇತ್ರದಲ್ಲಿ ಪಕ್ಷ ಸಂಘಟಿಸಿದ್ದೇನೆ . ಆದರೆ ಪಕ್ಷ ಈ ಬಾರೀ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡದೆ ಗೆಲ್ಲುವ ಕುದುರೆ ಬದಲು ಕ್ಷೇತ್ರದಲ್ಲಿ ಸತ್ತ ಕತ್ತೆಗೆ ಟಕೆಟ್ ನೀಡಿದೆ ಎಂದು ವಾಗ್ದಾಳಿ ನಡೆಸಿದರು.

    ಮೂಡಬಿದರೆ ಯಲ್ಲಿ ನಾನು ‌ಸ್ವಂತ ಖರ್ಚಿನಲ್ಲಿ ಮಾಡಿದ ಬಿಜೆಪಿ ಕಚೇರಿಗೆ ಈಗ ಬೀಗ ಹಾಕಿದ್ದೇನೆ. ಪಕ್ಷ ಬಿಡುವ ವಿಚಾರ ವಾಗಿ ಎರಡು ದಿನಗಳಲ್ಲಿ ನಿರ್ಧರಿಸುತ್ತೇನೆ ಎಂದು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply