LATEST NEWS
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಜೈನರ ಆಕ್ರೋಶ – ಮನೆಗೆ ನುಗ್ಗುವ ಎಚ್ಚರಿಕೆ ನೀಡಿದ ಮುಖಂಡರು
ಮಂಗಳೂರು ಸೆಪ್ಟೆಂಬರ್ 18: ಗಣೇಶೋತ್ಸವ ಕಾರ್ಯಕ್ರಮವೊಂದರಲ್ಲಿ ಜೈನ ಸಮುದಾಯದ ಮೇಲೆ ವಿವಾದಾತ್ಮಕ ಹೇಳಿಕೆ ನೀಡಿದ ಮಹೇಶ್ ತಿಮರೋಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರು ಭಾರತೀಯ ಜೈನ್ ಮಿಲನ್ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು.
ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಜೈನ್ ಮಿಲನ್ ವಲಯಾಧ್ಯಕ್ಷ ಸುದರ್ಶನ್ ಜೈನ್ ಅವರು, ಶಾಂತಿ ಕದಡುವಂತಹ ವ್ಯಕ್ತಿಗಳನ್ನು ಪೊಲೀಸರು ಬಂಧಿಸಬೇಕು. ಧರ್ಮ ಧರ್ಮಗಳ ಮಧ್ಯೆ ಮೈನಸು ಮೂಡಿಸುವಂತಹ ಕುಕುತ್ಯವನ್ನು ಮಾಡಿರೋದು ಕಾನೂನು ರೀತಿಯ ಅಪರಾಧವಾಗಿದೆ. ಹಾಗಾಗಿ ಪೊಲೀಸರು ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮತೆಗೆದುಕೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಪುಷ್ಪರಾಜ್ ಜೈನ್ ಮಾತನಾಡಿ, ಸಮಾಜದಲ್ಲಿಈ ರೀತಿಯ ಸಮಾಜ ಘಾತುಕ ಕೃತ್ಯಗಳನ್ನು ಮಾಡ್ತಾ,ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೂ, ತಿಮರೋಡಿ ವಿರುದ್ಧ ಬೆಳ್ತಂಗಡಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ದೂರು ನೀಡಿದ್ರೂ ಪೊಲೀಸರು ಕಾನೂನು ಕ್ರಮ ಕೈಗೊಳ್ಳದೇ ಇರುವುದು ದುರಾದೃಷ್ಟಕರವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆ ನೀಡಿದ್ರೆ, ಹಿಂದೂ ಮುಖಂಡರು ಹಾಗೂ ಜೈನ್ ಸಮುದಾಯದ ನೇತೃತ್ವದಲ್ಲಿ ಮನೆಗೆ ನುಗ್ಗುವ ಅನಿವಾರ್ಯ ಬರಬಹುದು ಎಂದು ಎಚ್ಚರಿಕೆ ನೀಡಿದರು.
You must be logged in to post a comment Login