Connect with us

    LATEST NEWS

    ಜಲೀಲ್ ಮರ್ಡರ್ ಕೇಸ್ – ಇಬ್ಬರು ಮಹಿಳೆ ಸೇರಿದಂತೆ ಐದು ಮಂದಿಯ ವಿಚಾರಣೆ…!!

    ಮಂಗಳೂರು ಡಿಸೆಂಬರ್ 26: ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ಶನಿವಾರ ರಾತ್ರಿ ನಡೆದ ಅಂಗಡಿ ಮಾಲಿಕ ಅಬ್ದುಲ್ ಜಲೀಲ್ (45) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದು ತನಿಖೆ ತೀವ್ರಗೊಳಿಸಿದ್ದಾರೆ.


    ವ್ಯಾಪಾರಿ ಜಲೀಲ್ ಹತ್ಯೆಯ ನಡೆಸಿ ಪರಾರಿಯಾದ ಇಬ್ಬರು ದುಷ್ಕರ್ಮಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಹಲವರನ್ನು ವಿಚಾರಣೆ ನಡೆಸಿದ್ದಾರೆ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದಾರೆ.
    ಈ ನಡುವೆ ಕಳೆದ ಕೆಲ ತಿಂಗಳ ಹಿಂದೆ ಯಾವುದೋ ಕಾರಣಕ್ಕೆ ಕೆಲ ಯುವಕರು ಹಾಗೂ ಮಹಿಳೆಯರು ಇವರೊಂದಿಗೆ ಮಾತಿನ ಚಕಮಕಿ ನಡೆಸಿ ಧಮ್ಕಿ ಹಾಕಿದ್ದ ವಿಚಾರ ಪೊಲೀಸ್‌ ತನಿಖೆಯಿಂದ ಬೆಳಕಿಗೆ ಬಂದಿದೆ. ಈಗ ಅದೇ ಯುವಕರು ಹಾಗೂ ಮಹಿಳೆಯರ ತಂಡ ಈ ಕೃತ್ಯ ಎಸಗಿರಬಹುದು ಎಂಬ ಅನುಮಾನ ಇದ್ದು ಪೊಲೀಸರು ಈ ಕೋನದಲ್ಲಿ ತನಿಖೆ ನಡೆಸುತ್ತಿದ್ದಾರೆ.


    ಹತ್ಯೆ ಪ್ರಕರಣ ಸಂಬಂಧ ಹೇಳಿಕೆ ನೀಡಿದ ಸಿಎಂ ಬೊಮ್ಮಾಯಿಯವರು, ಪ್ರಕರಣ ಸಂಬಂಧ ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ, ಕಾಟಿಪಳ್ಳದ ಜನರ ಬಳಿ ಮನವಿ ಮಾಡಿಕೊಂಡರು. ಅಲ್ಲದೆ, ಪೊಲೀಸರು ನ್ಯಾಯಯುತ ತನಿಖೆ ನಡೆಸಲಿದ್ದಾರೆಂದು ಭರವಸೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply