Connect with us

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜವಾನ್ ನಿರ್ದೇಶಕ ಅಟ್ಲಿ ಭೇಟಿ

ಸುಬ್ರಹ್ಮಣ್ಯ ಫೆಬ್ರವರಿ 01: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳು ಚಿತ್ರರಂಗ ಖ್ಯಾತ ನಿರ್ದೇಶದ ಅಟ್ಲಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಟ್ಲಿ ಕುಮಾರ್​ ಆಗಮಿಸಿ ದೇವರ ದರ್ಶನ ಪಡೆದರು.

ಈ ವೇಳೆ, ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸುವ ಭಕ್ತರ ಅನ್ನದಾನಕ್ಕೆ ಅಟ್ಲಿ ಅವರು 10 ಲಕ್ಷ ರೂಪಾಯಿ ದೇಣಿಗೆಯನ್ನು ಚೆಕ್​ ಮೂಲಕ ನೀಡಿದರು. ದೇವರ ದರ್ಶನದ ಬಳಿಕ ಪ್ರಸಾದ ಸ್ವೀಕರಿಸಿದರು. ಬ್ಯಾಂಕ್ ಚೆಕ್ ಅನ್ನು ದೇವಾಲಯದ ಕಾರ್ಯನಿರ್ವಹಣಾ ಅಧಿಕಾರಿ ಅರವಿಂದ ಅಯ್ಯಪ್ಪ ಸುತ್ತುಗುಂಡಿ ಅವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಅರವಿಂದ ಅಯ್ಯಪ್ಪ ಸುತ್ತುಗುಂಡಿ ಅವರು ದೇವಸ್ಥಾನದ ವತಿಯಿಂದ ಅಟ್ಲಿ ಅವರಿಗೆ ಶಾಲು ಹೊಂದಿಸಿ, ಸ್ಮರಣೆಗೆ ನೀಡಿ ಗೌರವಿಸಿದರು. ದೇವಸ್ಥಾನದ ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *