Connect with us

    LATEST NEWS

    ಲೈಂಗಿಕ ಹಗರಣದ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿದ ಮಲೆಯಾಳಂ ನಟ ಜಯಸೂರ್ಯ

    ತಿರುವನಂತಪುರ ಸೆಪ್ಟೆಂಬರ್ 01: ಮಲೆಯಾಳಂ ಚಿತ್ರರಂಗದಲ್ಲಿ ನಡೆದ ಲೈಂಗಿಕ ಹಗರಣಗಳ ಕುರಿತಂತೆ ಮೊದಲ ಬಾರಿಗೆ ನಟ ಜಯಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಸುಳ್ಳು ಸತ್ಯಕ್ಕಿಂತ ವೇಗವಾಗಿ ಹರಡುತ್ತದೆ. ಆದರೆ ಸತ್ಯವೇ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬುತ್ತೇನೆ’ ಎಂದು ಹೇಳಿದ್ದಾರೆ.


    ಸದ್ಯ ಅಮೇರಿಕಾದಲ್ಲಿರುವ ನಟ ಜಯಸೂರ್ಯ ತಮ್ಮ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳನ್ನು ನಿರಾಕರಿಸಿರುವ ಮಲಯಾಳ ನಟ ಜಯಸೂರ್ಯ, ಕಾನೂನು ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.
    ಈ ಕುರಿತಂತೆ ಇನ್‌ಸ್ಟಾಗ್ರಾಂನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಜಯಸೂರ್ಯ, ‘ಸುಳ್ಳು ಆರೋಪಗಳು ನನ್ನ ಮತ್ತು ನನ್ನ ಕುಟುಂಬವನ್ನು ಘಾಸಿಗೊಳಿಸಿವೆ’ ಎಂದು ಹೇಳಿದ್ದಾರೆ. ‘ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಎರಡು ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಈ ಆರೋಪಗಳನ್ನು ಕಾನೂನು ಬದ್ಧವಾಗಿಯೇ ಎದುರಿಸುತ್ತೇನೆ’ ಎಂದು ಹೇಳಿದರು.

    ‘ಆತ್ಮಸಾಕ್ಷಿ ಇಲ್ಲದವರು ಯಾರ ಮೇಲಾದರೂ ಸುಳ್ಳು ಆರೋಪ ಮಾಡಬಹುದು. ಅದು ತುಂಬಾ ಸುಲಭ. ಆದರೆ, ಕಿರುಕುಳದ ಸುಳ್ಳು ಆರೋಪವನ್ನು ಎದುರಿಸುವುದು ಕಿರುಕುಳದಷ್ಟೇ ನೋವುಂಟು ಮಾಡುತ್ತದೆ. ಸುಳ್ಳು ಸತ್ಯಕ್ಕಿಂತ ವೇಗವಾಗಿ ಹರಡುತ್ತದೆ. ಆದರೆ ಸತ್ಯವೇ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬುತ್ತೇನೆ’ ಎಂದು ಹೇಳಿದ್ದಾರೆ.

    ನ್ಯಾ. ಹೇಮಾ ಸಮಿತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ಜಯಸೂರ್ಯ ವಿರುದ್ಧ ನಟಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಗಳು ಕೇಳಿಬಂದಿದ್ದವು. ಅವರ ವಿರುದ್ಧ ಐಪಿಸಿ ಸೆಕ್ಷನ್ 354ರ ಅಡಿ ತಿರುವನಂತಪುರದ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಮೊದಲ ದೂರು ದಾಖಲಾದರೆ, ಕರಮಾನಾ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply