DAKSHINA KANNADA
ದಿವಂಗತ ಪ್ರವೀಣ್ ನೆಟ್ಟಾರು ಹೊಸ ಮನೆಗೆ ಜೆ.ಪಿ.ನಡ್ಡಾ ಭೇಟಿ….!!
ಪುತ್ತೂರು ಎಪ್ರಿಲ್ 30: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ರಾಜ್ಯದಲ್ಲಿ ಪ್ರವಾಸದಲ್ಲಿರುವ ಜೆಪಿ ನಡ್ಡಾ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿರುವ ದಿವಂಗತ ಪ್ರವೀಣ್ ನೆಟ್ಟಾರು ಅವರ ಹೊಸ ಮನೆಗೆ ತೆರಳಿ ಪ್ರವೀಣ್ ಪೋಷಕರು ಹಾಗೂ ಪತ್ನಿ ನೂತನ ಜೊತೆ ಮಾತುಕತೆ ನಡೆಸಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.
ತುಂಬಾ ದುಃಖದಾಯಕ ಘಟನೆ ನಡೆದು ಹೋಗಿದೆ. ಎಸ್ಡಿಪಿಐ ಮತ್ತು ಪಿಎಫ್ಐ ಈ ಹತ್ಯೆಯ ಹಿಂದಿದ್ದು, ಇದು ಖಂಡನೀಯ. ಈ ಘಟನೆ ನಂತರ ಆ ಸಂಘಟನೆಯನ್ನು ನಿಷೇಧ ಮಾಡಲಾಯಿತು. ನಮ್ಮ ಸರ್ಕಾರ ನಿಷೇಧ ಮಾಡಿ ಎನ್ಐಎ ತನಿಖೆ ಮಾಡುತ್ತಿದೆ ಎಂದು ಹೇಳಿದರು.
ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ. ಇಂಥ ಮಾನಸಿಕತೆ ವಿರುದ್ಧ ನಮ್ಮ ಹೋರಾಟ ನಿರ್ಣಾಯಕ ಘಟ್ಟದವರೆಗೂ ಮುಂದುವರಿಯಲಿದೆ. ನ್ಯಾಯ ಸಿಗುವವರೆಗೂ ಹೋರಾಟ ಇರಲಿದೆ. ಅವರ ಕುಟುಂಬ ಸದಸ್ಯರ ಜೊತೆ ನಮ್ಮ ಸರ್ಕಾರ ಇರಲಿದೆ. ನಾನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ನ್ಯಾಯ ಸಿಗುವವರೆಗೂ ವಿರಮಿಸುವುದಿಲ್ಲ, ಅವರ ಬಲಿದಾನ ಎಂದಿಗೂ ವ್ಯರ್ಥ ಆಗುವುದಿಲ್ಲ ಎಂದೂ ನಡ್ಡಾ ಹೇಳಿದರು.
You must be logged in to post a comment Login