LATEST NEWS
ಉಡುಪಿ ಶ್ರೀಕೃಷ್ಣ ಮಠಕ್ಕೆ ಸೂಪರ್ ಸ್ಟಾರ್ ಜ್ಯೂನಿಯರ್ ಎನ್ ಟಿಆರ್ ಭೇಟಿ
ಉಡುಪಿ ಅಗಸ್ಟ್ 31: ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್ ಟಿಆರ್ ಬೇಟಿ ನೀಡಿ ಕೃಷ್ಣನ ದರ್ಶನ ಪಡೆದರು.
ನಟ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ ಎನ್ ಟಿಆರ್ ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಪ್ರಾಣ, ಗರುಡ ದೇವರ ದರ್ಶನವನ್ನು ಕೈಗೊಂಡರು.
ಜೂನಿಯರ್ ಎನ್ಟಿಆರ್ ಕುಟುಂಬ ಸಮೇತರಾಗಿ ಉಡುಪಿಗೆ ಆಗಮಿಸಿದ್ದರು. ಜ್ಯೂನಿಯರ್ ಎನ್ ಟಿಆರ್ ಅವರ ತಾಯಿ ಕುಂದಾಪುರ ಮೂಲದವರಾಗಿದ್ದಾರೆ.
You must be logged in to post a comment Login