Connect with us

    LATEST NEWS

    ಕೋಟೇಶ್ವರ ದೇವಸ್ಥಾನದ ಕೆರೆಗೆ ಬಿದ್ದು ವೈದ್ಯ ಹಂಗಳೂರಿನ ಗೌರೀಶ್ ಬಿ.ಆರ್ ಸಾವು

    ಕುಂದಾಪುರ ಸೆಪ್ಟೆಂಬರ್ 20: ಕೋಟೇಶ್ವರದ ದೇವಸ್ಥಾನದ ಕೆರೆಗೆ ಬಿದ್ದು ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ತಯಾರಿ ನಡೆಸುತ್ತಿದ್ದ ವಿಧ್ಯಾರ್ಥಿ ಸಾವನಪ್ಪಿದ ಘಟನೆ ನಡೆದಿದೆ.


    ಮೃತರನ್ನು ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿದ್ದ ಅವರು ಉನ್ನತ ವಿದ್ಯಾಭ್ಯಾಸದ ಸಿದ್ಧತೆ ನಡೆಸುತ್ತಿದ್ದರು. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಬುಧವಾರ ತಡರಾತ್ರಿ ಅವರ ಬ್ಯಾಗ್, ಮೊಬೈಲ್ ಫೋನ್, ಚಪ್ಪಲಿ ಕಂಡು ಬಂದಿತ್ತು. ಸಂಜೆ 5:30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲುಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮೃತ ಯುವಕನ ಸಹೋದರ ವಿಘ್ನೇಶ್ ಬಿ.ಆರ್. ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply