Connect with us

LATEST NEWS

ಆಳ್ವಾಸ್ ವಿಧ್ಯಾರ್ಥಿನಿ ಕಾವ್ಯಾ ಪ್ರಕರಣ- ಅರೆಬೆತ್ತಲೆ ಮೆರವಣಿಗೆ

ಆಳ್ವಾಸ್ ವಿಧ್ಯಾರ್ಥಿನಿ ಕಾವ್ಯಾ ಪ್ರಕರಣ- ಅರೆಬೆತ್ತಲೆ ಮೆರವಣಿಗೆ

ಮಂಗಳೂರು ಸೆಪ್ಟೆಂಬರ್ 23: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವಿನ ಪ್ರಕರಣವನ್ನು ಸಿಒಡಿ ತನಿಖೆಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ಮಂಗಳೂರಿನಲ್ಲಿ ರಸ್ತೆಗಿಳಿದು ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆಗೆ ಮುಂದಾದ ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ .

ಮಂಗಳೂರಿನ ಹಂಪನಕಟ್ಟ ವೃತ್ತದ ಬಳಿ ಸೇರಿದ ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿಯ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಾವ್ಯ ಪ್ರಕರಣ ನಡೆದು ಇಂದಿಗೆ 60 ದಿನಗಳು ಕಳೆದರೂ ಕಾವ್ಯ ಸಾವಿನ ರಹಸ್ಯ ಬಯಲಿಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾವ್ಯ ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳ ತಂಡ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಕಾವ್ಯ ಪ್ರಕರಣವನ್ನು ಸಿಓಡಿಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿಯ ಸದಸ್ಯರು ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆಗೆ ಮುಂದಾದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿಯ ಸದಸ್ಯರೆಲ್ಲ ಬಂಧಿಸಿದರು. ಈ ಸಂದರ್ಭದಲ್ಲಿ ಕಾವ್ಯಾಳ ತಂದೆ ಮತ್ತು ತಾಯಿಯನ್ನು ಕೂಡ ಪೊಲೀಸರು ಬಂಧಿಸಿದರು.

ವಿಡಿಯೋ

Share Information
Continue Reading
Advertisement
Click to comment

Leave a Reply

Your email address will not be published. Required fields are marked *