Connect with us

    DAKSHINA KANNADA

    ಕಡಬ: ಕಾರು ಮತ್ತು ತೂಫನ್ ನಡುವೆ ಅಪಘಾತ – ನಾಲ್ವರು ಮೃತ್ಯು

    ಕಡಬ, ಏಪ್ರಿಲ್ 18: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಕೆಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

    ಕಾರು ಕುಕ್ಕೆ ಸುಬ್ರಮಣ್ಯ ಕಡೆ ಹಾಗೂ ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಒರ್ವ ಮಹಿಳೆ ಸೇರಿದಂತೆ ನಾಲ್ವರು, ಮೃತಪಟ್ಟಿದ್ದಾರೆ.

    ಇನ್ನು ಮೃತರು ಬೇಳೂರು ಕಡೆಯವರು ಎಂದು ತಿಳಿದು ಬಂದಿದ್ದು, ತೂಫನ್ ನಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply