DAKSHINA KANNADA
ಕಡಬ – ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು ಚಾಲಕ
ಕಡಬ ಅಗಸ್ಟ್ 15: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ನಡೆದಿದ್ದು, ಬೈಕ್ ಸವಾರ ಗಾಯಗೊಂಡಿದ್ದು ಆಸ್ಪತ್ರಗೆ ದಾಖಲಿಸಲಾಗಿದೆ.
ಗಾಯಗೊಂಡ ವ್ಯಕ್ತಿಯನ್ನು ಆಲಂಕಾರು ಗ್ರಾಮದ ಕಕ್ವೆ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಅವರು ಮನೆಯಿಂದ ಉಪ್ಪಿನಂಗಡಿಗೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಆತೂರು ಅಶ್ವಿನಿ ಆಸ್ಪತ್ರೆ ಮುಂಭಾಗ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಢಿಕ್ಕಿಯಾಗಿದೆ.
ಘಟನೆಯಲ್ಲಿ ಬೈಕ್ ಪಲ್ಟಿಯಾಗಿ ಸವಾರ ಸುಧಾಕರ ಅವರು ಕೆಳಕ್ಕೆ ಎಸೆಯಲ್ಪಟ್ಟು ಗಾಯಗೊಂಡಿದ್ದರು. ಢಿಕ್ಕಿಯಾದರೂ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಬೈಕ್ ಸವಾರ ಸುಧಾಕರ ಅವರು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರಾರಿಯಾದ ಕಾರಿನ ಗುರುತು ಪತ್ತೆಗಾಗಿ ಸ್ಥಳೀಯ ಅಂಗಡಿಯಲ್ಲಿನ ಸಿಸಿ ಟಿವಿ ಫೂಟೇಜ್ಗಳನ್ನು ಪರಿಶೀಲಿಸಲಾಗಿದೆ.
You must be logged in to post a comment Login