DAKSHINA KANNADA
ಕಡಬ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವತಿ

ಕಡಬ ಎಪ್ರಿಲ್ 5: ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ ಪುಷ್ಪಲತಾ ಯಾನೆ ದೀಕ್ಷಾ (25) ಎಂದು ಗುರುತಿಸಲಾಗಿದೆ.

ಕಡಬದ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈಕೆಯು ವೈಯಕ್ತಿಕ ಕಾರಣಕ್ಕಾಗಿ ತನ್ನ ಮನೆ ಸಮೀಪ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.